ದರ್ಶನ್‌ ಮಧ್ಯಂತರ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಕೆ

(ನ್ಯೂಸ್ ಕಡಬ) newskadaba.com . 14. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ಗೆ ಹೈಕೋರ್ಟ್‌ ನೀಡಿದ ಜಾಮೀನು ಆದೇಶವನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಗೃಹ ಸಚಿವಾಲಯ ಗ್ರೀನ್‌ ಸಿಗ್ನಲ್‌ ನೀಡಿದೆ.

ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಹೇಳಿದ್ದಾರೆ. ಗೃಹ ಸಚಿವಾಲಯ ಗ್ರೀನ್‌ ಸಿಗ್ನಲ್‌ ನೀಡಿದ ಬೆನ್ನಲ್ಲೇ ಸೋಮವಾರದ ಬಳಿಕ ಪೊಲೀಸರು ಮೇಲ್ಮನವಿ ಸಲ್ಲಿಕೆ ಮಾಡುವ ಸಾಧ್ಯತೆಯಿದೆ. ಈ ಪ್ರಕರಣದಲ್ಲಿ ಪೊಲೀಸರ ಪರವಾಗಿ ವಾದ ಮಂಡಿಸಲು ಹಿರಿಯ ವಕೀಲ ವಿಎನ್‌ ರಘುಪತಿ ಅವರನ್ನು ಗೃಹ ಸಚಿವಾಲಯ ನೇಮಿಸಿದೆ.

Also Read  ಪೇಶ್ ಇಮಾಮ್ ಮತ್ತು ಮೌಝನ್ ➤ ವಕ್ಫ್ ಸಮಿತಿಗೆ ದಾಖಲೆ ಸಲ್ಲಿಸಿ

 

error: Content is protected !!
Scroll to Top