ಜೆಡಿಎಸ್ ಅಂತಿಮ ದಿನಗಳನ್ನು ಎಣಿಸುತ್ತಿದೆ: ಗೆಲುವಿನ ಬಳಿಕ ಸಿಪಿ ಯೋಗೇಶ್ವರ್

(ನ್ಯೂಸ್ ಕಡಬ)newskadaba.com   ಬೆಂಗಳೂರು, ನ.22:  ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವು ಇಂದು  ಪ್ರಕಟವಾಗಿದ್ದು, ಎಲ್ಲಾ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಚನ್ನಪಟ್ಟಣ ಉಪಚುನಾವಣೆ ಫಲಿತಾಂಶವೂ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ ಗೆಲುವು ದಾಖಲಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ, ಕೇಂದ್ರ ಸಚಿವ ಎಚ್ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಹ್ಯಾಟ್ರಿಕ್ ಸೋಲಾಗಿದೆ.ಚನ್ನಪಟ್ಟಣದಲ್ಲಿ ಗೆಲುವಿನ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಪಿ ಯೋಗೇಶ್ವರ್ ಅವರು, ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅವರು ತಮ್ಮ ಪ್ರತಿಷ್ಠೆಗೆ ಅವರ ಮಗ ನಿಖಿಲ್ ಕುಮಾರಸ್ವಾಮಿಯನ್ನು ಬಲಿಕೊಟ್ಟಿದ್ದಾರೆ ಎಂದು ಎಂದರು.

Scroll to Top