ವೇತನ ಹೆಚ್ಚಳ, ಬಾಕಿ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ- ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು

(ನ್ಯೂಸ್ ಕಡಬ)newskadaba.com ಬೆಂಗಳೂರು, ನ.25.  ವೇತನ ಹೆಚ್ಚಳ, ಬಾಕಿ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆ ಒತ್ತಾಯಿಸಿ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ.

ಮುಂದಿನ ತಿಂಗಳ ಡಿ.31ರಿಂದ ಸಾರಿಗೆ ಮುಷ್ಕರಕ್ಕೆ ಸಾರಿಗೆ ನೌಕರರ ಹಿರಿಯ ಮುಖಂಡ ಅನಂತ ಸುಬ್ಬರಾವ್ ಕರೆ ನೀಡಿದ್ದಾರೆ. ಪ್ರಕ್ರಿಯೆಯಂತೆ ಡಿ.9 ರಂದು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ಚಲೋ ಮಾಡಿ ಅಂದು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ನೀಡಲಾಗುತ್ತದೆ ಎಂದು ಕಾರ್ಮಿಕ ಮುಖಂಡರು ತಿಳಿಸಿದ್ದಾರೆ.

Also Read  ಮಾದಕ ವಸ್ತು ಬಳಕೆ ವಿರುದ್ಧ ಜಾಗೃತಿ ಅಭಿಯಾನಕ್ಕೆ ನಟ ಉಪೇಂದ್ರ ಚಾಲನೆ

 

 

error: Content is protected !!
Scroll to Top