ಚಿನ್ಮಯ್ ದಾಸ್ ಬ್ರಹ್ಮಚಾರಿ ಬಂಧನ ಪ್ರಕರಣ: ನಿವೃತ್ತ ನ್ಯಾಯಮೂರ್ತಿ, ಅಧಿಕಾರಿಗಳಿಂದ ಪ್ರಧಾನಿ ಮೋದಿಗೆ ಮನವಿ

(ನ್ಯೂಸ್ ಕಡಬ) newskadaba.com ನವದೆಹಲಿ, . 28. ಇಸ್ಕಾನ್​ನ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಬಂಧನಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ವಹಿಸಬೇಕೆಂದು 68 ನಿವೃತ್ತ ನ್ಯಾಯಮೂರ್ತಿಗಳು, ಅಧಿಕಾರಿಗಳು ಮತ್ತು ಹಾಲಿ ಸಂಸದರ ಗುಂಪು ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ.

68 ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳು, ಜಮ್ಮು ಮತ್ತು ಕಾಶ್ಮೀರದ ಮಾಜಿ ಡಿಜಿಪಿ ಶೇಶ್ ಪಾಲ್ ವೈದ್, ಐಎಎಸ್‌, ಐಪಿಎಸ್‌,ಐಆರ್‌ಎಸ್‌, ಐಐಎಸ್, ‌ಐಎಫ್‌ಎಸ್‌ ಮತ್ತು ರಾಜ್ಯ ಅಧಿಕಾರಿಗಳ ಗುಂಪು. ಇಸ್ಕಾನ್​ನ ಚಿನ್ಮಯ್ ಕೃಷ್ಣ ಅವರ ಬಂಧನ ಸೇರಿದಂತೆ ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

 

Scroll to Top