ರಸ್ತೆ ಅಪಘಾತ: ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಯಾದಗಿರಿ, . 29. ಕಾರು ಮತ್ತು ಬೈಕ್ ಢಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಶಹಾಪುರ ತಾಲೂಕಿನ ಮದ್ರಿಕಿ ಗ್ರಾಮದ ಬಳಿ ನಡೆದಿದೆ.


ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದ ನಿವಾಸಿ ಹಳ್ಳೆಪ್ಪ ದೊಡ್ಡನಂದಪ್ಪ (45), ಶಹಾಪುರ ತಾಲೂಕಿನ ವನದುರ್ಗ ಗ್ರಾಮದ ನಿವಾಸಿ ಮಲ್ಲಯ್ಯ ಹಣಮಂತ ಮೃತ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಬೈಕ್ ಸವಾರರು ಜೇವರ್ಗಿ ತಾಲೂಕಿನ ಚಿಕ್ಕಮುದವಾಳ ಗ್ರಾಮದ ಬಳಿ ಇರುವ ಜಮೀನ್ನು ನೋಡಿಕೊಂಡು ಮರಳಿ ಶಹಾಪುರ ಕಡೆಗೆ ಬರುವಾಗ ಈ ಅಪಘಾತ ಸಂಭವಿಸಿದೆ. ಕಾರು ಚಾಲಕ ಪರಾರಿಯಾಗಿದ್ದು, ಈ ಕುರಿತು ಭೀಮರಾಯನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಉಡುಪಿ: ಭಾರತ-ನೇಪಾಳ ಗಡಿ ಭಾಗದಲ್ಲಿ ಪೋಕ್ಸೋ ಆರೋಪಿಯ ಬಂಧನ

 

error: Content is protected !!
Scroll to Top