ಪ್ರವೀಣ್ ನೆಟ್ಟಾರು ಕೊಲೆ ಕೇಸ್: ನಾಪತ್ತೆಯಾಗಿರುವ ನೌಷದ್ ಮನೆ ಮೇಲೆ ಎನ್ಐಎ ದಾಳಿ

(ನ್ಯೂಸ್ ಕಡಬ) newskadaba.com ಡಿ. 05 ಬೆಂಗಳೂರು:  ಬೆಳ್ಳಾರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಆರೋಪಿ ನೌಷದ್ ಮನೆ ಮೇಲೆ ಎನ್‌ಐಎ ತಂಡ ಇಂದು ಮುಂಜಾನೆ ದಾಳಿ ನಡೆಸಿದೆ.

ಬೆಂಗಳೂರಿನಿಂದ ಆಗಮಿಸಿದ 5 ಜನರ ಎನ್‌ಐಎ ತಂಡ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷದ್ ನ ಮನೆಗೆ ಇಂದು ಮುಂಜಾನೆ 5.30 ರ ಸುಮಾರಿಗೆ ದಾಳಿ ಮಾಡಿದ್ದು, ಪರಿಶೀಲನೆ ನಡೆಸುತ್ತಿದೆ. ನೌಷದ್ ಪತ್ತೆಗಾಗಿ ಎನ್‌ಐಎ 2 ಲಕ್ಷ ರೂ. ಬಹುಮಾನ ಘೋಷಿಸಿತ್ತು. ಎನ್‌ಐಎ ಅಧಿಕಾರಿಗಳಿಗೆ ಬೆಳ್ತಂಗಡಿ ಪೊಲೀಸರು ಸಾಥ್ ನೀಡಿದ್ದಾರೆ. ಇನ್ನು ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯದ 16 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

Also Read  ಮರ್ಧಾಳ ಗುಡ್ ಶೆಫರ್ಡ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಮಕ್ಕಳಿಗೆ ಪರಿಸರ ಕಾಳಜಿ ಮಾಹಿತಿ ಕಾರ್ಯಾಗಾರ ಮಗುವಿನ ಜನುಮದಿನ ಗಿಡನಾಟಿ ಮಾಡಿ ಆಚರಿಸಿ- ವಲಯಾರಣ್ಯಾಧಿಕಾರಿ ಅಪೂರ್ವ ಮಾವಿನಕಟ್ಟೆ ಸಲಹೆ

error: Content is protected !!
Scroll to Top