ಎಸ್ಎಂ ಕೃಷ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

(ನ್ಯೂಸ್ ಕಡಬ) newskadaba.com . 10.ನವದೆಹಲಿ:   ಕರ್ನಾಟಕದ  ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ರವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿಯವರು  ಸಂತಾಪ ಸೂಚಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಪ್ರಧಾನಿ ಮೋದಿ ಭಾವಪೂರ್ವ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಎಸ್.ಎಂ.ಕೃಷ್ಣಾಜಿಯವರು ಅಸಾಧಾರಣ ನಾಯಕರಾಗಿದ್ದರು, ಸಮಾಜದ ಎಲ್ಲ ವರ್ಗಗಳ ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯಿಲ್ಲದೆ ಶ್ರಮಿಸಿದರು. ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅಧಿಕಾರಾವಧಿಯಲ್ಲಿ ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಗಮನಹರಿಸಿದ್ದಾರೆ. ಎಸ್.ಎಂ.ಕೃಷ್ಣ ಜೀ ಅವರು ಸಮೃದ್ಧ ಓದುಗ ಮತ್ತು ಚಿಂತಕರೂ ಆಗಿದ್ದರು ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

Also Read  ಬೊಲೆರೋ ವಾಹನ ಅಪಘಾತ ➤ 16 ಮಂದಿಗೆ ಗಾಯ

error: Content is protected !!
Scroll to Top