ಕರಾಯ: ಭೀಕರ ರಸ್ತೆ ಅಪಘಾತ ► ಬಸ್ಸಿನ ಚಕ್ರ ಹರಿದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.27. ಖಾಸಗಿ ಬಸ್ ಹಾಗೂ ಬೈಕ್‌ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕರಾಯ ಎಂಬಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.

ಮೃತರನ್ನು ಕೊಲ್ಯ ನಿವಾಸಿ ಚಂದ್ರಶೇಖರ(34) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿಯಿಂದ ಕಕ್ಕೆಪದವು ತೆರಳುತ್ತಿದ್ದ ಜೀವನ್ ಜ್ಯೋತಿ ಖಾಸಗಿ ಬಸ್ ಹಾಗೂ ಟಿವಿಎಸ್ ವೇಗೋ ಸ್ಕೂಟಿ ನಡುವೆ ಢಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಸವಾರನ ಮೇಲೆ ಬಸ್ಸಿನ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Also Read  ಕಡಬ: ಕೊರೋನಾ ಸೋಂಕಿಗೆ 32 ವರ್ಷದ ವ್ಯಕ್ತಿ ಬಲಿ

error: Content is protected !!
Scroll to Top