ಕುಂದಾಪುರ: ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಶವ ಪತ್ತೆ



(ನ್ಯೂಸ್ ಕಡಬ) newskadaba.com ಡಿ. 23 ಮಂಗಳೂರು: ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಶವ ಪತ್ತೆ, ಶನಿವಾರ ಸಂಜೆ ತ್ರಾಸಿ ಬೀಚ್ ಸಮುದ್ರ ತೀರದಲ್ಲಿ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಜಾಸ್ಕಿ ರೈಡರ್ ರೋಹಿದಾಸ್ ಯಾನೆ ರವಿ 41 ಶವ 36 ಗಂಟೆಗಳ ಬಳಿಕ ಸಮೀಪದ ಹೊಸಪೇಟೆ ರುದ್ರ ಭೂಮಿಯ ಹಿಂಭಾಗದ ಸಮುದ್ರ ತೀರದಲ್ಲಿ ಪತ್ತೆ ಆಗಿದೆ.







ಸ್ಥಳೀಯ ಮೀನುಗಾರರಾದ ಶಾಸ ಖಾರ್ವಿ ಹಾಗು ಮೋಹನ ಖಾರ್ವಿ ಇವರು ಇಂದು ಬೆಳಿಗ್ಗೆ 3 ಗಂಟೆ ಸುಮಾರಿಗೆ ಮೀನುಗಾರಿಕೆ ತೆರಳಲು ಹೋಗುತ್ತಿದ್ದಾಗ ಶವ ತೇಲುತ್ತಿರುವುದನ್ನು ಗಮನಿಸಿದ್ದಾರೆ. ಸ್ಥಳೀಯ ಕರಾವಳಿ ಕಾವಲು ಪಡೆಯ ಕರಾವಳಿ ನಿಯಂತ್ರಣ ದಳದ ಸಿಬ್ಬಂದಿ ನಿಶಾಂತ್ ಖಾರ್ವಿಗೆ ಮಾಹಿತಿ ನೀಡಿ, ತದನಂತರ ಮೂವರು ಸೇರಿ ತೇಲುತ್ತಿದ್ದ ಶವವನ್ನು ಮೇಲೆಕ್ಕೆ ತಂದು, ಪೊಲೀಸರಿಗೆ ಮಾಹಿತಿ ನೀಡಿದರು.






Nk Cake House

error: Content is protected !!
Scroll to Top