ಮಂಗಳೂರಿನಲ್ಲಿ ರಾಜ್ಯದ ಮೊದಲ ಸಿ ಬ್ಯಾಂಡ್ ಹವಾಮಾನ ರಾಡಾರ್ ಅಳವಡಿಕೆ

(ನ್ಯೂಸ್ ಕಡಬ) newskadaba.com ಜ.07 ಬೆಂಗಳೂರು: ನಗರದಲ್ಲಿ ಕರ್ನಾಟಕದ ಮೊದಲ ಸಿ ಬ್ಯಾಂಡ್ ಹವಾಮಾನ ರಾಡಾರ್(DWR) ಅಳವಡಿಕೆ ಕಾರ್ಯ ಕೆಲವೇ ದಿನಗಳಲ್ಲಿ ಸಂಪೂರ್ಣಗೊಳ್ಳಲಿದೆ. ತಾಂತ್ರಿಕ ತೊಂದರೆಗಳಿಂದ ಸ್ವಲ್ಪ ವಿಳಂಬವಾದರೂ ಜನವರಿ ಅಂತ್ಯದ ವೇಳೆಗೆ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರದ ಮುಖ್ಯಸ್ಥ ಎನ್ ಪುವಿಯರಸನ್ ತಿಳಿಸಿದ್ದಾರೆ.

ಇಲಾಖೆಯ 150ನೇ ವಾರ್ಷಿಕೋತ್ಸವದ ಅಂಗವಾಗಿ TMD ಬೆಂಗಳೂರು ಶನಿವಾರ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಪುವಿಯರಸನ್ ಅವರು, ಆರಂಭದಲ್ಲಿ ಜನವರಿ 15 ರೊಳಗೆ ಪೂರ್ಣಗೊಳಿಸಲು ಯೋಜಿಸಲಾಗಿದ್ದ ರಾಡಾರ್ ಈಗ ಈ ತಿಂಗಳ ಅಂತ್ಯದ ವೇಳೆಗೆ ಕಾರ್ಯನಿರ್ವಹಿಸಲು ಪ್ರಾರಂಭಿಸುವ ಭರವಸೆ ಇದೆ ಎಂದು ಹೇಳಿದರು.

Also Read  ➤ 2023ರಲ್ಲಿ ದೇಶದಲ್ಲಿ ಮೊದಲ ಹೈಡ್ರೋಜನ್ ರೈಲು ಸಂಚಾರ ➤ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

Nk Cake House

ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದಲ್ಲಿ (KSNDMC) ಆಯೋಜಿಸಲಾದ ಕಾರ್ಯಾಗಾರವು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಮತ್ತು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಕೃಷಿ ಹವಾಮಾನ ವಿಭಾಗದ ಕೊಡುಗೆಗಳೊಂದಿಗೆ ಹಲವಾರು ಟೆಕ್ನಿಕಲ್ ಸೆಷನ್ಸ್ ಗಳನ್ನು ಒಳಗೊಂಡಿತ್ತು. ಕಾರ್ಯಾಗಾರದಲ್ಲಿ ಬೆಂಗಳೂರಿನಲ್ಲಿ S-ಬ್ಯಾಂಡ್ DWR ಅನ್ನು ಸ್ಥಾಪಿಸುವಲ್ಲಿ ಐಎಂಡಿ ಎದುರಿಸುತ್ತಿರುವ ಸವಾಲುಗಳ ಬಗ್ಗೆಯೂ ಪುವಿಯರಸನ್ ಚರ್ಚಿಸಿದರು. ಯೋಜನೆಯು ಭೂಸ್ವಾಧೀನಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿದೆ. ಏಕೆಂದರೆ ಐಎಂಡಿಗೆ ಟವರ್ ಮತ್ತು ಯುಟಿಲಿಟಿ ಕೋಣೆಗೆ 30×30 ಮೀಟರ್ ಪ್ಲಾಟ್ ಅಗತ್ಯವಿದೆ ಎಂದು ವಿವರಿಸಿದರು.

error: Content is protected !!
Scroll to Top