ರಾಜ್ಯದ 30ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳ ದಾಳಿ

(ನ್ಯೂಸ್ ಕಡಬ) newskadaba.com ಕಡಬ, ಫೆ.05. ನವದೆಹಲಿ: ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ 30ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನಲ್ಲೇ ಎಂ ಪ್ರೋ ಪ್ಯಾಲೇಸ್, ಹೋಟೆಲ್, ಕಲ್ಯಾಣ ಮಂಟಪದ ಸೇರಿದಂತೆ 10ಕ್ಕೂ ಹೆಚ್ಚಿ ಕಡೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ.

ಮೈಸೂರಿನ ದೇವೇಗೌಡ ವೃತ್ತದ ಬಳಿ ಇರುವ ಎಂ ಪ್ರೋ ಪ್ಯಾಲೇಸ್‌ ಸೇರಿದಂತೆ ವಿವಿಧೆಡೆ ಶೋಧ ನಡೆಸುತ್ತಿದ್ದಾರೆ.ಮೈಸೂರಿನಲ್ಲಿ ರಾಮಕೃಷ್ಣನಗರದಲ್ಲಿರುವ ಗುತ್ತಿಗೆದಾರ ರಾಮಕೃಷ್ಣೇಗೌಡ ಅವರ ಮನೆ ಮೇಲೂ ಐಟಿ ದಾಳಿ ನಡೆದಿದೆ. ರಾಮಕೃಷ್ಣೇಗೌಡ ಇಟ್ಟಿಗೆ ಫ್ಯಾಕ್ಟರ್ ಸೇರಿದಂತೆ ಇನ್ನಿತರ ವ್ಯವಹಾರ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

Also Read  ಬಿಪಿಎಲ್, ಅಂತ್ಯೋದಯಕ್ಕೆ ಇನ್ನು ನೇರ ನಗದು ಇಲ್ಲ, ಬದಲಿಗೆ ಆಹಾರ ಕಿಟ್

error: Content is protected !!
Scroll to Top