ಕಡಬ: ನೆಲ್ಯಾಡಿಗೆಂದು ತೆರಳಿದ್ದ ಯುವಕ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಮಾ.31. ಕೆಲಸಕ್ಕೆಂದು ತೆರಳಿದ ಯುವಕನೋರ್ವ ಮೂರು ದಿನಗಳಾದರೂ ಮನೆಗೆ ಬರದೆ ನಾಪತ್ತೆಯಾಗಿರುವ ಘಟನೆ ಕಡಬದಲ್ಲಿ ನಡೆದಿದೆ.

ನಾಪತ್ತೆಯಾಗಿರುವ ಯುವಕನನ್ನು ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕಾರ್ಕಳ ನಿವಾಸಿ ಮಣಿ ಎಂಬವರ ಪುತ್ರ ಶ್ರೀಜಿತ್(24) ಎಂದು ಗುರುತಿಸಲಾಗಿದೆ. ಈತ ಬುಧವಾರದಂದು ನೆಲ್ಯಾಡಿಗೆಂದು ಕೆಲಸಕ್ಕೆ ತೆರಳಿದ್ದು, ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದಾರೆ ಎಂದು ಮಣಿ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಸವಣೂರು: ಹಿಂಸಾತ್ಮಕವಾಗಿ ಗೋ ಸಾಗಾಟ ➤ ವಾಹನ ಸಹಿತ 2 ಗೋವುಗಳು ಪೊಲೀಸರ ವಶಕ್ಕೆ

error: Content is protected !!
Scroll to Top