ಹುಟ್ಟೂರಿಗೆ ಆಗಮಿಸಿದ ಲಷ್ಕರ್ – ಎ – ತೋಯ್ಬಾ ಉಗ್ರರನ್ನು ಸದೆಬಡಿದಿದ್ದ ತುಳುನಾಡಿನ ವೀರ ಯೋಧ ► ಕಡಬ ತಾಲೂಕಿಗೆ ಹೆಮ್ಮೆಯ ಗರಿಯನ್ನು ತಂದಿತ್ತ ಝುಬೈರ್ ನೇರೆಂಕಿಗೆ ಹುಟ್ಟೂರ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಎ.01. ಕಳೆದ ಫೆಬ್ರವರಿ ತಿಂಗಳಲ್ಲಿ ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಉಗ್ರರನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿ ಊರಿಗೆ ಆಗಮಿಸಿದ ತುಳುನಾಡಿನ ವೀರ ಯೋಧನಿಗೆ ಹುಟ್ಟೂರ ಸನ್ಮಾನ ಭಾನುವಾರದಂದು ಆತೂರಿನಲ್ಲಿ ನಡೆಯಿತು.

ಫೆಬ್ರವರಿ ತಿಂಗಳ ಎರಡನೇ ವಾರದಲ್ಲಿ ಜಮ್ಮು ಕಾಶ್ಮೀರದ ಕರಣ್ ನಗರಕ್ಕೆ ರಣ ಹೇಡಿಗಳಂತೆ ನುಗ್ಗಿದ ಲಷ್ಕರ್-ಎ-ತೋಯ್ಬಾ ಭಯೋತ್ಪಾದಕರನ್ನು ಅಟ್ಟಾಡಿಸಿ ಮುಲಾಜಿಲ್ಲದೇ ಹೊಡೆದುರುಳಿಸಿ ತನ್ನ ಹುದ್ದೆಗೆ ಗೌರವ ಸಲ್ಲಿಸಿದ್ದ ತಂಡದಲ್ಲಿದ್ದ ಕಡಬ ತಾಲೂಕಿನ ಆತೂರು ಸಮೀಪದ ಬಜತ್ತೂರು ಗ್ರಾಮದ ನೇರೆಂಕಿಯ ಮೇಲೂರು ನಿವಾಸಿ ಸಮೂನ್ ಬ್ಯಾರಿ ಹಾಗೂ ಆಮಿನಮ್ಮ ದಂಪತಿಯ ದ್ವಿತೀಯ ಪುತ್ರ ಜುಬೇರ್ ಎಂ. ನೇರಂಕಿ ಭಾನುವಾರದಂದು ಹುಟ್ಟೂರಿಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಸ್ವೀಕಾರ ಹಾಗೂ ಮೆರವಣಿಗೆ ನಡೆಸಿ ಸನ್ಮಾನಿಸಲಾಯಿತು. ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿದ ಊರವರು ಸಂಭ್ರಮಾಚರಿಸಿದರು. ಕಟ್ಟಡವೊಂದರಲ್ಲಿ ಅವಿತು ಕುಳಿತು ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದ ಉಗ್ರರನ್ನು ಮಟ್ಟ ಹಾಕಿದ್ದರು. ಲಷ್ಕರ್ ಏ ತೊಯ್ಬಾ ಉಗ್ರಗಾಮಿ ಸಂಘಟನೆಯ ಕೆಲ ಕಿರಾತಕರು ನುಗ್ಗಿ ಅಲ್ಲಿದ್ದ ಸೈನಿಕರ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಹಲವು ಭಾರತೀಯ ಯೋಧರು ಹುತಾತ್ಮರಾಗಿದ್ದರು. ಇಂತಹ ಸನ್ನಿವೇಶದಲ್ಲೂ ಅಪಾಯಕಾರಿ ಹಾಗೂ ಅನಿರೀಕ್ಷಿತ ದಾಳಿಯಿಂದ ಕಂಗೆಡದ ಭಾರತದ ಸಿ.ಆರ್.ಪಿ.ಎಫ್ ಯೋಧರು ಎಲ್ಲಾ ದಾಳಿಗಳನ್ನು ಎದುರಿಸಿ ನಿಂತು ತಕ್ಕ ಉತ್ತರ ನೀಡುವ ಮೂಲಕ ಭಯೋತ್ಪಾದಕರನ್ನು ಸದೆಬಡಿದಿದ್ದರು.

ತನ್ನ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೆನೇರಂಕಿಯಲ್ಲಿ ಪಡೆದಿದ್ದ ಇವರು ಪ್ರೌಢ ಶಿಕ್ಷಣವನ್ನು ರಾಮಕುಂಜದ ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆಯಲ್ಲಿ ಮುಗಿಸಿದ್ದರು. ನಂತರ ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಪಿಯು ಹಾಗೂ ಬಿ.ಬಿ.ಎಂ. ವ್ಯಾಸಂಗವನ್ನು ಮುಗಿಸಿ ದೇಶಸೇವೆಗೆ ತನ್ನನ್ನು ತಾನು ತೊಡಗಿಸಿಕೊಂಡ ಇವರು ಫೆಬ್ರವರಿ ತಿಂಗಳ ನಂತರ ಇದೀಗ ಮೊದಲ ಬಾರಿಗೆ ಹುಟ್ಟೂರಿಗೆ ಆಗಮಿಸುತ್ತಿದ್ದಾರೆ. ಶನಿವಾರ ರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ ಇವರು ಭಾನುವಾರದಂದು ತನ್ನ ಊರಿಗೆ ತಲುಪಿದ್ದಾರೆ.

error: Content is protected !!

Join the Group

Join WhatsApp Group