ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ನಾಳೆ ಮಾಕ್ ಡ್ರಿಲ್

(ನ್ಯೂಸ್ ಕಡಬ) newskadaba.com, ಮೇ.06: ಪಹಲ್ಗಾಮ್​ನಲ್ಲಿ ನಡೆದ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಭರ್ಜರಿ ತಾಲೀಮು ನಡೆಸಿದೆ. ಹೀಗಾಗಿ ಕೇಂದ್ರ ಸರ್ಕಾರ ದೇಶಾದ್ಯಂತ ಮಾಕ್​ ಡ್ರಿಲ್ ಮಾಡಲು ಆದೇಶಿಸಿದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾಕ್​ ಡ್ರಿಲ್​​ ಮಾಡಲಾಗುತ್ತಿದೆ.ಇತ್ತ ಕರ್ನಾಟಕದಲ್ಲಿ ಕೂಡ ಮಾಕ್​ ಡ್ರಿಲ್​​ ಮಾಡಲು ನಿರ್ಧರಿಸಲಾಗಿದೆ. ಬೆಂಗಳೂರು, ಕಾರವಾರ ಮತ್ತು ರಾಯಚೂರಿನಲ್ಲಿ ನಾಳೆ ಮಾಕ್​ ಡ್ರಿಲ್​ಗೆ ನಿರ್ಧರಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರದಿಂದ ಸುತ್ತೋಲೆ ಬರುತ್ತದೆ ಎಂದು ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಹೇಳಿದ್ದಾರೆ.

ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಮಾಧ್ಯಮದವರೊಂದಿಗೆ ಮಾತನಾಡಿ, ಬೆಂಗಳೂರು, ಕಾರವಾರ, ರಾಯಚೂರಿನಲ್ಲಿ ನಾಳೆ ಸಂಜೆ 4 ಗಂಟೆ ಮಾಕ್​ಡ್ರಿಲ್​ಗೆ ನಿರ್ಧಾರ ಮಾಡಿದ್ದೇವೆ. ಈ ಕುರಿತಾಗಿ ಈಗಾಗಲೇ ಅಗ್ನಿಶಾಮಕದಳ, ಸಿವಿಲ್ ಡಿಫೆನ್ಸ್ ಅಧಿಕಾರಿಗಳ ಜತೆ ಸಭೆ ಮಾಡಲಾಗಿದೆ‌ ಎಂದು ತಿಳಿಸಿದ್ದಾರೆ.

Also Read  ಪುತ್ತೂರು: ಕಾಲೇಜು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ➤ ಪೊಲಿಸರನ್ನು ಕಂಡು ಚದುರಿದ ಗುಂಪು..!

ಮಾಕ್ ​ಡ್ರಿಲ್​ನಲ್ಲಿ ಎನ್​​ಸಿಸಿ, ಎನ್​​ಎಸ್​​ಎಸ್​, ಸಿವಿಲ್‌ ಡಿಫೆನ್ಸ್ ಮತ್ತು ವೈದ್ಯರು ಭಾಗಿಯಾಗುತ್ತಾರೆ. ಪೊಲೀಸ್ ಠಾಣೆ, ಅಗ್ನಿಶಾಮಕ ದಳ ಠಾಣೆ ಸೇರಿ 35 ಕಡೆ ಸೈರನ್​ ಇದೆ, ಅದರಲ್ಲಿ 32 ಕಾರ್ಯ ನಿರ್ವಹಿಸುತ್ತಿವೆ. ಜನರು ಏನು ಮಾಡಬೇಕು, ಮಾಡಬಾರದು ಎಂಬ ಬಗ್ಗೆ ಕೇಂದ್ರ ಸರ್ಕಾರದಿಂದ ಸುತ್ತೋಲೆ ಬರುತ್ತದೆ ಎಂದು ಹೇಳಿದ್ದಾರೆ.

error: Content is protected !!
Scroll to Top