ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ!

(ನ್ಯೂಸ್ ಕಡಬ) newskadaba.com , ಮೇ.17: ಆಶಾ ಕಾರ್ಯಕರ್ತೆಯರ ಗೌರವ ಧನವನ್ನು ರೂ.1,000 ಹೆಚ್ಚಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಕಳೆದ ಬಜೆಟ್‌ನಲ್ಲಿ ಗೌರವ ಧನ ಹೆಚ್ಚಿಸುವ ಬಗ್ಗೆ CM ಸಿದ್ದರಾಮಯ್ಯ ಭರವಸೆ ನೀಡಿದ್ದರು.

ಇದೀಗ ಕೊಟ್ಟ ಮಾತಿನಂತೆ ಆಶಾ ಕಾರ್ಯಕರ್ತೆಯರ ಗೌರವ ಧನ ಏರಿಸಿದ್ದಾರೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾದಂತೆ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹ ಧನ ನೀಡುವುದರ ಮೂಲಕ ರೂ. ಗೌರವ ಧನವನ್ನು ರೂ. 1,000 ಹೆಚ್ಚಿಸಲಾಗುವುದು ಎಂದಿದ್ದಾರೆ.

Also Read  ಮಸೂದ್ ಹಾಗೂ ಫಾಝಿಲ್ ಮನೆಗೆ ಹೆಚ್ಡಿಕೆ ಭೇಟಿ- ಕುಟುಂಬಸ್ಥರಿಗೆ ಸಾಂತ್ವನ ➤ 5 ಲಕ್ಷ ರೂ. ಪರಿಹಾರ ವಿತರಣೆ

 

error: Content is protected !!
Scroll to Top