(ನ್ಯೂಸ್ ಕಡಬ) newskadaba.com , ಮೇ.17: ಮಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆಯ ಬಳಿಕ ದಕ್ಷಿಣ ಕನ್ನಡದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಇಂದು ಬಂಟ್ವಾಳದಲ್ಲಿ ಬೈಕ್ನಲ್ಲಿ ಬಂದ ಇಬ್ಬರು ಓರ್ವ ಯುವಕನಿಗೆ ಚೂರಿ ಇರಿದು ಪರಾರಿಯಾಗಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೇ ಸೇತುವೆ ಬಳಿ ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.

ಗಾಯಗೊಂಡ ಹಮೀದ್ ಎಂಬವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದು, ಒಂದೇ ಕೋಮಿನ ತಂಡದ ನಡುವೆ ಘರ್ಷಣೆಯಿಂದಾಗಿ ಈ ಕೃತ್ಯ ನಡೆದಿರುವ ಶಂಕೆ ಉಂಟಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪೈಂಟರ್ ಕೆಲಸ ಮಾಡುವ ಹಮೀದ್ ಯಾನೆ ಅಮ್ಮಿಗೆ ಎಂಬಾತ ಗಾಯಗೊಂಡಿದ್ದಾರೆ. ಇರಿತದಿಂದ ಹಮೀದ್ ಕೈ ಭಾಗಕ್ಕೆ ಏಟಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಇರಿತಕ್ಕೆ ವೈಯಕ್ತಿಕ ದ್ವೇಷ ಕಾರಣವೇ, ತಂಡಗಳ ನಡುವಿನ ಘರ್ಷಣೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.