ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ

(ನ್ಯೂಸ್ ಕಡಬ) newskadaba.com , ಮೇ.17: ದ.ಕ ಸುಳ್ಯ ಕೋರಂಬಡ್ಕದಲ್ಲಿ ನಡೆದ ಕೊರಗಜ್ಜನ ಹರಕೆ ನೇಮೋತ್ಸವದಲ್ಲಿBJP ರಾಜ್ಯಾಧ್ಯಕ್ಷ BYವಿಜಯೇಂದ್ರ ಭಾಗಿಯಾದರು. ಸುಳ್ಯ ಜಯನಗರದ ಶ್ರೀನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ ಗುಳಿಗ ದೈವ &ಕೊರಗಜ್ಜ ದೈವಸ್ಥಾನದಲ್ಲಿ ಶ್ರೀಕೊರಗಜ್ಜ ದೈವದ ನೇಮ& ಪರಿವಾರ ದೈವಗಳ ತಂಬಿಲ ಸೇವೆ ನಡೆಯಿತು.

ಮೂರನೇ ಬಾರಿ ಮೋದಿ ಪ್ರಧಾನಿಯಾಗುವಂತೆ ಸಂಕಲ್ಪ ಮಾಡಿ BJP ಜಯನಗರ ಬೂತ್ ಸಮಿತಿ ಹರಕೆ ಹೇಳಿತ್ತು. ಇದೀಗ BJP ವತಿಯಿಂದ ಹರಕೆ ನೇಮೋತ್ಸವ ನಡೆದಿದ್ದು, ವಿಜಯೇಂದ್ರಗೆ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ಸಂಸದ ಬ್ರಿಜೇಶ್ ಚೌಟ ಮೂಲಕ ಪ್ರಸಾದವನ್ನು ಮೋದಿಗೆ ತಲುಪಿಸಲಿದೆ.

Scroll to Top