ಚಾರ್ಮಾಡಿಘಾಟ್‌ನಲ್ಲಿ ರಸ್ತೆಗೆ ಬಿದ್ದ ಬೃಹತ್ ಮರ, ಸಂಚಾರ ಅಸ್ತವ್ಯಸ್ಥ

(ನ್ಯೂಸ್ ಕಡಬ) newskadaba.com, ಜೂ.03. ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿರುವ ಚಾರ್ಮಾಡಿ ಘಾಟ್‌ನಲ್ಲಿ ಭಾರಿ ಮಳೆಯಿಂದಾಗಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿರುವ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುವಂತಾಗಿತ್ತು.

ಪಶ್ಚಿಮ ಘಟ್ಟದಲ್ಲಿ ಪ್ರಾರಂಭವಾಗಿರುವ ಮಳೆ ಆರ್ಭಟದಿಂದ ಮಣ್ಣಿನ ಜರಿತ, ಮರ ಬಿರುಕು ಮುಂತಾದ ಪ್ರಕೃತಿ ಅಡಚಣೆಗಳ ಸಂಭವ ಹೆಚ್ಚಾಗಿದೆ. ಬೃಹತ್ ಮರ ರಸ್ತೆಗೆ ಬಿದ್ದ ಕಾರಣ ನೂರಾರು ವಾಹನಗಳು ಕಿ.ಮೀ.ಗಳಷ್ಟು ದೂರ ಸಾಲಾಗಿ ನಿಂತಿದ್ದು, ವಾಹನ ಸವಾರರು ಹಾಗೂ ಪ್ರವಾಸಿಗರು ಪರದಾಡಿದರು.

Also Read  ತುಳುನಾಡಿನ ದೈವಾರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲ ಟ್ವೀಟ್ - ಆರೋಪಿಯ ಬಂಧನ

ಘಟನಾ ಸ್ಥಳಕ್ಕೆ ತಕ್ಷಣವೇ ಸ್ಥಳೀಯ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ, ಮರವನ್ನು ತೆರವುಗೊಳಿಸಿದರು. ಈ ಘಾಟಿ ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಗಡಿಭಾಗದಲ್ಲಿದ್ದು, ಹಲವು ವರ್ಷಗಳಿಂದ ಮಳೆ ಸಮಯದಲ್ಲಿ ಈ ರೀತಿಯ ಅಡಚಣೆಗಳು ಸಂಭವಿಸುತ್ತಲೇ ಇವೆ. ಸಂಬಂಧಪಟ್ಟ ಇಲಾಖೆಗಳಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

error: Content is protected !!
Scroll to Top