(ನ್ಯೂಸ್ ಕಡಬ) newskadaba.com, ಜೂ.05. ಬೆಂಗಳೂರು: ರಾಜ್ಯ ರಾಜಧಾನಿಯ ಬೆಂಗಳೂರಿನಲ್ಲಿ ನಿನ್ನೆ ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಪ್ರಕರಣಕ್ಕೆ ಸಿಎಂ, ಡಿಸಿಎಂ ಮತ್ತು ಪೊಲೀಸ್ ವ್ಯವಸ್ಥೆಯೇ ನೇರ ಹೊಣೆ ಎಂಬುದು ಎಲ್ಲರ ಆರೋಪ. ಈ ನಡುವೆ ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ.

ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿಯ ಪದಾಧಿಕಾರಿಗಳ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 106 ರ ಅಡಿಯಲ್ಲಿ ಪ್ರಕರಣ ದಾಖಲಿಸಲು ಆಗ್ರಹಿಸಿದ್ದಾರೆ.