ರಾಜ್ಯದ ಸಿ.ಎಂ, ಡಿ.ಸಿ.ಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ

(ನ್ಯೂಸ್ ಕಡಬ) newskadaba.com, ಜೂ.06. ಅರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ವಿಧಾನಸಭೆಯ ಪ್ರತಿಪಕ್ಷ ನಾಯಕರ ಕೊಠಡಿ ಸಂಖ್ಯೆ 160ರಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಎಫ್‍ಐಆರ್‌ನಲ್ಲಿ ಕೆಎಸ್‍ಸಿಎ, ಆರ್.ಸಿ.ಬಿ, ಮತ್ತು ಏಜೆನ್ಸಿಯಾದ ಡಿ.ಎನ್.ಎಯನ್ನು ಆರೋಪಿಗಳಾಗಿ ಹೆಸರಿಸಿದ್ದಾರೆ. ಸ್ವತಃ ಮುಖ್ಯಮಂತ್ರಗಳೇ ಆರೋಪಿ ನಂಬರ್ 1, ಉಪ ಮುಖ್ಯಮಂತ್ರಿಗಳು ಆರೋಪಿ ನಂಬರ್ 2, ಮಾನ್ಯ ಗೃಹ ಸಚಿವ ಪರಮೇಶ್ವರ್ ಅವರು ಆರೋಪಿ ನಂಬರ್ 3 ಎಂದು ವಾಗ್ದಾಳಿ ನಡೆಸಿದರು.

Also Read  ಮನೆ ಕಾಮಗಾರಿ ವೇಳೆ ತಡೆಗೋಡೆ ಕುಸಿತ    ➤  ಮೂವರು ಕಾರ್ಮಿಕರ ಮೃತ್ಯು...!          

ಕಾಲ್ತುಳಿತ ಹಾಗೂ 11 ಜನ ಅಮಾಯಕರ ಸಾವಿನ ಸಂಬಂಧ ಕೊನೆಗೂ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ. ರಾಜ್ಯ ಹೈಕೋರ್ಟ್ ಸ್ವಯಂಪ್ರೇರಿತ ಕೇಸ್ ತೆಗೆದುಕೊಂಡು ರಾಜ್ಯ ಸರಕಾರಕ್ಕೆ ಛೀಮಾರಿ ಹಾಕಿದ ನಂತರ ಸರಕಾರ ಎಚ್ಚತ್ತುಕೊಂಡಿದೆ ಎಂದು ವಿಶ್ಲೇಷಿಸಿದರು.

ಮುಖ್ಯಮಂತ್ರಿಗಳು, ಪೊಲೀಸ್ ಅಧಿಕಾರಿಗಳನ್ನು ಹರಕೆಯ ಕುರಿ ಮಾಡುವ ಬದಲಾಗಿ ತಾವೇ ಜವಾಬ್ದಾರಿ, ನೈತಿಕ ಹೊಣೆ ಹೊತ್ತು ಉಪ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿದೆ ಎಂದು ಮತ್ತೊಮ್ಮೆ ಒತ್ತಾಯಿಸಿದರು.

error: Content is protected !!
Scroll to Top