(ನ್ಯೂಸ್ ಕಡಬ) newskadaba.com ಜೂ. 13. ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗುರುವಾರದಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಜರುಗಿತು.
ಈ ಸಂದರ್ಭ ಸುಮಾರು 55 ಮಂದಿಗೆ ಮಾವು, ಹಲಸು, ಸಫೋಟ, ಪೇರಳೆ, ನೇರಳೆ ಮುಂತಾದ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು. ಶ್ರೀ ಅಬ್ದುಲ್ ನೌಷಾದ್ ಅವರಿಗೆ ಹಲಸಿನಹಣ್ಣಿನ ಗಿಡವನ್ನು ಡಾ.ಮುರಲಿ ಮೋಹನ್ ಚೂಂತಾರು ಅವರು ನೀಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಾ.ರಾಜಶ್ರೀ ಮೋಹನ್, ಡಾ ಪ್ರಜ್ವಲ್, ದಂತ ಪರಿಚಾರಕಿಯರಾದ ರಮ್ಯಾ, ಚೈತ್ರಾ, ಸುಷ್ಮಿತಾ, ಜಯಶ್ರೀ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಳೆದ ಹತ್ತು ವರುಷಗಳಿಂದ ಸುರಕ್ಷಾ ದಂತ ಚಿಕಿತ್ಸಾಲಯ ನಿರಂತರವಾಗಿ ಸಸಿ ವಿತರಣೆ ಮತ್ತು ವನಮಹೋತ್ಸವ ಕಾರ್ಯಕ್ರಮವನ್ನು ಜೂನ್ ತಿಂಗಳಿಡೀ ಆಚರಿಸುತ್ತಾ ಬಂದಿದೆ.