(ನ್ಯೂಸ್ ಕಡಬ) newskadaba.com ಜೂ. 13. ಗುಜಾರಾತ್ ನ ಅಹಮದಾಬಾದ್ ಬಳಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಟಾಟಾ ಗ್ರೂಪ್ ಕಂಪನಿಯು 1 ಕೋಟಿ ರೂಪಾಯಿ ಪರಿಹಾರ ನೀಡಲಿದೆ ಎಂದು ಕಂಪನಿ ಅಧ್ಯಕ್ಷ ಎನ್ ಚಂದ್ರಶೇಖರನ್ ಘೋಷಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರ ವೈದ್ಯಕೀಯ ವೆಚ್ಚವನ್ನು ಕೂಡಾ ಟಾಟಾ ಗ್ರೂಪ್ ಭರಿಸಲಿದೆ ಮತ್ತು ಅವರಿಗೆ ಅಗತ್ಯವಿರುವ ಎಲ್ಲಾ ಆರೈಕೆ ಮತ್ತು ಬೆಂಬಲ ದೊರೆಯುವಂತೆ ನೋಡಿಕೊಳ್ಳಲಿದೆ ಎಂದು ಅವರು ಹೇಳಿದರು. ಜೊತೆಗೆ ವಿಮಾನ ಪತನಗೊಂಡು ಬಿದ್ದ ಬಿಜೆ ಮೆಡಿಕಲ್ಸ್ ಹಾಸ್ಟೆಲ್ ನಿರ್ಮಾಣಕ್ಕೆ ನಾವು ಸಹಾಯ ಮಾಡುತ್ತೇವೆ ಎಂದೂ ತಿಳಿಸಿದರು.