ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ- ಮಂಗಳೂರಿಗೆ ಆಗಮಿಸಿದ NIA ತಂಡ

(ನ್ಯೂಸ್ ಕಡಬ) newskadaba.com ಜೂ. 14. ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ಕೈಗೆತ್ತಿಕೊಂಡಿದ್ದು, ಇದೀಗ ಅಧಿಕಾರಿಗಳ ತಂಡ ಮಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಡಿಎಸ್ಪಿ ಪವನ್ ಕುಮಾರ್ ನೇತೃತ್ವದ ಎನ್ಐಎ ತಂಡ ನಡೆಸುತ್ತಿದ್ದು, ಅದರಂತೆ ಇಂದು ಬೆಂಗಳೂರಿನಿಂದ ಗಮಿಸಿದ ತಂಡ ಮಂಗಳೂರು ಸಿಸಿಬಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕುತ್ತಿವೆ.

error: Content is protected !!
Scroll to Top