ಇನ್ನುಮುಂದೆ ಏರ್ ಇಂಡಿಯಾ ವಿಮಾನ ಹತ್ತಲ್ಲ – ಕ್ರಿಕೆಟಿಗ ಡೇವಿಡ್ ವಾರ್ನರ್ ಶಪಥ

(ನ್ಯೂಸ್ ಕಡಬ) newskadaba.com ಜೂ. 14. ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನವು ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿದ ದುರಂತದಲ್ಲಿ 265 ಮಂದಿ ಮೃತಪಟ್ಟಿದ್ದರು. ಈ ಬೆನ್ನಲ್ಲೇ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇವಿಡ್‌ ವಾರ್ನರ್‌ ಯಾವುದೇ ಕಾರಣಕ್ಕೂ ಇನ್ನು ಮುಂದೆ ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವುದಿಲ್ಲ ಎಂದು ಶಪಥ ಮಾಡಿದ್ದಾರೆ.

ಈ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿರುವ ವಾರ್ನರ್‌, ಇನ್ನು ಮುಂದೆ ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವುದಿಲ್ಲ’ ಎಂದು ತಿಳಿಸಿದ್ದಾರೆ. ಜತೆಗೆ ಏರ್‌ ಇಂಡಿಯಾ ಕಂಪನಿಯ ಮಾಜಿ ಉದ್ಯೋಗಿ ವಿವೇಕ್‌ ಎಂಬವವರ ಹಳೆಯ ಪೋಸ್ಟ್‌ ವೊಂದನ್ನು ವಾರ್ನರ್‌ ಮರು ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ ನಲ್ಲಿ ವಿಮಾನದಲ್ಲಿನ ಸಮಸ್ಯೆಗಳ ಬಗ್ಗೆ ಪೈಲಟ್‌ಗಳು, ಎಂಜಿನಿಯರ್‌ಗಳು ಮತ್ತು ಸಿಬ್ಬಂದಿ ಕಳವಳ ವ್ಯಕ್ತಪಡಿಸಿದ್ದರು. ಆದರೂ ನಿರ್ಲಕ್ಷ್ಯಿಸಲಾಗಿದೆ’ ಎಂದು ಬರೆದಿದೆ. ವಾರ್ನರ್ ಏರ್‌ ಇಂಡಿಯಾ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಅವರು ಗಂಟೆಗಟ್ಟಲೇ ವಿಮಾನದಲ್ಲಿ ಕಾಯಿಸಿದ್ದಕ್ಕಾಗಿ ಏರ್‌ ಇಂಡಿಯಾದ ವಿರುದ್ಧ ಕಿಡಿ ಕಾರಿದ್ದರು. ‘ಪೈಲಟ್‌ಗಳಿಲ್ಲದ ವಿಮಾನವನ್ನು ನಾವು ಹತ್ತಿದ್ದೇವೆ. ಪೈಲಟ್‌ಗಳು ಇಲ್ಲದಿದ್ದರೆ ವಿಮಾನಕ್ಕೆ ಪ್ರಯಾಣಿಕರನ್ನು ಏಕೆ ಹತ್ತಿಸುತ್ತೀರಿ’ ಎಂದು ಪ್ರಶ್ನಿಸಿದ್ದರು.

error: Content is protected !!
Scroll to Top