ಇನ್ನುಮುಂದೆ ರಾಜ್ಯ ಸರಕಾರದಿಂದಲೇ ಆಂಬ್ಯುಲೆನ್ಸ್ ನಿರ್ವಹಣೆ

(ನ್ಯೂಸ್ ಕಡಬ) newskadaba.com ಜೂ. 14. ರಾಜ್ಯದಲ್ಲಿ ಆಂಬ್ಯುಲೆನ್ಸ್‌ ಸೇವೆಯನ್ನು ಉತ್ತಮಗೊಳಿಸುವ ಉದ್ದೇಶದಿಂದ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ಇದಕ್ಕಾಗಿ ರಾಜ್ಯದಲ್ಲಿನ 108 ಆಂಬ್ಯುಲೆನ್ಸ್ ಸೇವೆಯನ್ನು ಖಾಸಗಿ ಹಿಡಿತದಿಂದ ಮುಕ್ತಗೊಳಿಸಿ ಆರೋಗ್ಯ ಇಲಾಖೆಯಿಂದಲೇ ನಿರ್ವಹಣೆ ಮಾಡುವ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ ನೀಡಿದೆ. ಅದರಂತೆ ಖಾಸಗಿ ಪಾಲುದಾರರಾದ ಜಿವಿಕೆ-ಇಎಂಆರ್‌ಐ ಸಂಸ್ಥೆಯಿಂದ ಆಂಬ್ಯುಲೆನ್ಸ್ ನಿರ್ವಹಣೆಯ ಹಿಂಪಡೆಯಲಾಗಿದ್ದು, 108 ಆಂಬ್ಯುಲೆನ್ಸ್‌ ಕಮಾಂಡ್‌ ಮತ್ತು ಕಂಟ್ರೋಲ್‌ ಕೇಂದ್ರವನ್ನು ಆರೋಗ್ಯ ಇಲಾಖೆಯ ಅಧೀನಕ್ಕೆ ಒಳಪಡಿಸಲಾಗಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸರ್ಕಾರದ ಕ್ರಮದಿಂದ 108 ಆರೋಗ್ಯ ಕವಚ ಸೇವೆಯಲ್ಲಿ ಸಾಕಷ್ಟು ಸುಧಾರಣೆಯಾಗುವ ವಿಶ್ವಾಸವಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 250 ಕೋಟಿಯಷ್ಟು ಉಳಿತಾಯವಾಗಲಿದೆ. 108 ಅಧೀನದಲ್ಲಿರುವ ಒಟ್ಟು 715 ಆಂಬ್ಯುಲೆನ್ಸ್‌ ನಿರ್ವಹಣೆಗಾಗಿ ರಾಜ್ಯಮಟ್ಟದಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್ ತೆರೆಯಲಾಗುವುದು ಎಂದು ಹೇಳಿದ್ದಾರೆ.

error: Content is protected !!
Scroll to Top