ಕಾನೂನು ಪದವಿ ಪರೀಕ್ಷೆ ► ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ಮುಸ್ತಫಾ ಕಡಬ

(ನ್ಯೂಸ್ ಕಡಬ) newskadaba.com ಕಡಬ, ಎ.06. ಕರ್ನಾಟಕ ರಾಜ್ಯ ಕಾನೂನು ಮಹಾ ವಿದ್ಯಾಲಯ ಹುಬ್ಬಳ್ಳಿ ನಡೆಸಿದ 2016-17 ನೇ ಸಾಲಿನ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ ಹಾಗೂ ದ.ಕ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಕಡಬ ಮುಸ್ತಫಾ ಎಂ. ಪಡೆದುಕೊಂಡಿದ್ದಾರೆ.

ಪುತ್ತೂರು ವಿವೇಕಾನಂದ ಕಾನೂನು ಕಾಲೇಜಿನ ವಿದ್ಯಾರ್ಥಿಯಾದ ಇವರು ಕಡಬ ನಿವಾಸಿಯಾಗಿದ್ದು ತೀರಾ ಬಡತನದಿಂದ ಕಠಿಣ ಪರಿಶ್ರಮದಿಂದ ಕಾನೂನು ವ್ಯಾಸಂಗ ಮಾಡಿದ್ದು, ಪ್ರಸ್ತುತ ಇವರು ನ್ಯಾಯವಾದಿಗಳಾದ ಅಶ್ರಫ್ ಕೆ ಅಗ್ನಾಡಿ, ಅಬ್ದುಲ್ ಮಜೀದ್ ಖಾನ್ ರವರ ಪುತ್ತೂರು ಕಛೇರಿಯಲ್ಲಿ ಕಾನೂನು ವೃತ್ತಿ ಆರಂಬಿಸಿರುತ್ತಾರೆ. ಇವರು ಕಡಬ ಕೊರುಂದೂರು ನಿವಾಸಿ ಅಬ್ದುಲ್ ಹಮೀದ್ ಮತ್ತು ಮರಿಯಮ್ಮ ದಂಪತಿಯ ಪುತ್ರರಾಗಿದ್ದಾರೆ.

Also Read  ಮಲಂಕರ ಕ್ಯಾಥೋಲಿಕ್ ಚರ್ಚ್ ಸ್ಥಾಪಕ ಮಾರ್ ಇವಾನಿಯೋಸ್ ರ 65 ನೇ ಪುಣ್ಯಸ್ಮರಣೆ ► ಕೆರ್ಮಾಯಿ ಸೈಂಟ್ ಮೇರೀಸ್ ಚರ್ಚ್‌ನಲ್ಲಿ ಅನುಸ್ಮರಣಾ ಪಾದಯಾತ್ರೆ

error: Content is protected !!
Scroll to Top