ಮರದ ಕೊಂಬೆ ಬಿದ್ದು ಯುವಕ ಮೃತ್ಯು- ಕಣ್ಣುಗಳನ್ನು ದಾನ ಮಾಡಿದ ಕುಟುಂಬ



(ನ್ಯೂಸ್ ಕಡಬ) newskadaba.com ಜೂ. 20. ಮರದ ಕೊಂಬೆ ಬಿದ್ದ ಪರಿಣಾಮ ಪ್ರಜ್ಞೆ ಕಳೆದುಕೊಂಡು ಕೋಮಾಸ್ಥಿತಿಯಲ್ಲಿದ್ದ ಯುವಕ ಅಕ್ಷಯ್‌ ಮೃತಪಟ್ಟಿದ್ದು, ಈ ಬೆನ್ನಲ್ಲೇ ಆತನ ಕುಟುಂಬಸ್ಥರು ಕಣ್ಣು ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ.







ಜೂನ್‌ 15 ರಂದು ಬೆಂಗಳೂರಿನ ಬನಶಂಕರಿ ಬಳಿ ಅಕ್ಷಯ್ ಬೈಕ್‌ನಲ್ಲಿ ತೆರಳುತ್ತಿದ್ದಾಗ ಆತನ ತಲೆಯ ಮೇಲೆ ಮರದ ಕೊಂಬೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತಲೆಗೆ ತೀವ್ರತರದ ಪೆಟ್ಟು ಬಿದ್ದಿದ್ದರಿಂದ ಆತನ ಬ್ರೈನ್‌ ಡೆಡ್‌ ಆಗಿದೆ ಎಂದು ವೈದ್ಯರು ಘೋಷಣೆ ಮಾಡಿದ್ದು, ಆದರೆ ಅಕ್ಷಯ್‌ ಚಿಕಿತ್ಸೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಗುರುವಾರದಂದು ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ಕುಟುಂಬ ಅಕ್ಷಯ್‌ ಕಣ್ಣುಗಳನ್ನು ದಾನ ಮಾಡಲು ನಿರ್ಧರಿಸಿವೆ.






error: Content is protected !!
Scroll to Top