ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ 7 ಪಿಎಸ್ಐ, 31 ಹೆಚ್.ಸಿ, 78 ಪಿಸಿಗಳ ಸಹಿತ ಜಿಲ್ಲೆಯ 116 ಸಿಬ್ಬಂದಿಗಳ ವರ್ಗಾವಣೆ



(ನ್ಯೂಸ್ ಕಡಬ) newskadaba.com ಜೂ. 20. ದಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಗುರಿಯನ್ನು ಹೊಂದಿರುವ ಮಹತ್ವದ ಆಡಳಿತಾತ್ಮಕ ಸುಧಾರಣೆಯಲ್ಲಿ ಮಂಗಳೂರು ನಗರ ಕಮಿಷನರೇಟ್ ಮತ್ತು ಪುತ್ತೂರು ನಗರ, ಪುತ್ತೂರು ಗ್ರಾಮಾಂತರ, ಕಡಬ, ವಿಟ್ಲ, ಬೆಳ್ಳಾರೆ ಹಾಗೂ ಸುಬ್ರಹ್ಮಣ್ಯ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿನ 7 ಮಂದಿ ಎ.ಎಸ್.ಐ, 31 ಮಂದಿ ಹೆಡ್‌ಕಾನ್‌ಸ್ಟೇಬಲ್ ಮತ್ತು 78 ಮಂದಿ ಕಾನ್‌ಸ್ಟೇಬಲ್‌ಗಳನ್ನು ವರ್ಗಾವಣೆಗೊಳಿಸಿ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಅವರು ಆದೇಶ ಹೊರಡಿಸಿದ್ದಾರೆ.







ಜಿಲ್ಲೆಗೆ ಹಿರಿಯ ಪೊಲೀಸ್ ಅಧಿಕಾರಿಗಳ ಆಗಮನದ ವೇಳೆ ದ.ಕ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಬ್ಬಂದಿಗಳ ಬದಲಾವಣೆ ಬಗ್ಗೆ ಸಾರ್ವಜನಿಕ ಬೇಡಿಕೆಯಿದ್ದ ನಿಟ್ಟಿನಲ್ಲಿ ವರ್ಗಾವಣೆ ಆಗಿದೆ ಎಂದು ತಿಳಿದು ಬಂದಿದೆ.






error: Content is protected !!
Scroll to Top