ನಿಯಂತ್ರಣ ಕಳೆದುಕೊಂಡು ಲಾರಿ ಪಲ್ಟಿ- ಚಾಲಕ ಪಾರು



(ನ್ಯೂಸ್ ಕಡಬ) newskadaba.com ಜೂ. 26. ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಬದಿಗೆ ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಗ್ರಾಮದ ಕೊಡ್ಯಕಲ್ಲು ಎಂಬಲ್ಲಿ ನಡೆದಿದೆ.





 

ಬೆಂಗಳೂರಿನಿಂದ ಮಂಗಳೂರಿಗೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗಳನ್ನು ಸಾಗಿಸುತ್ತಿದ್ದ ಈ ಲಾರಿಯು ದಾರಿ ಮಧ್ಯದ ಕೊಡ್ಯಕಲ್ಲು ಎಂಬಲ್ಲಿ ಅಪಘಾತಕ್ಕೀಡಾಗಿ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನೆಯಿಂದ ಲಾರಿಯು ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.






 

ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!
Scroll to Top