ಕಡಲ್ಕೊರೆತ ಪ್ರದೇಶಗಳಿಗೆ ಸ್ಪೀಕರ್ ಯುಟಿಕೆ ಭೇಟಿ



(ನ್ಯೂಸ್ ಕಡಬ) newskadaba.com ಜೂ. 28. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಫರೀದ್ ಅವರು ಉಳ್ಳಾಲದ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಬಟ್ಟಂಪಾಡಿಯಲ್ಲಿ  ಕಡಲ್ಕೊರೆತಕ್ಕೀಡಾದ ಪ್ರದೇಶಗಳಿಗೆ ಅವರು ಭೇಟಿ ನೀಡಿದರು.







 

ಈ ಪ್ರದೇಶದಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲಾಗುತ್ತಿದೆ. ತಾಲೂಕು ವ್ಯಾಪ್ತಿಯಲ್ಲಿ ಕಡಲಕೊರೆತ ಪ್ರದೇಶಗಳಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು. ಗುಣಮಟ್ಟದ ಕಾಮಗಾರಿ ನಿರ್ವಹಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು.






error: Content is protected !!
Scroll to Top