(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 28. ಕರ್ನಾಟಕ ಸಾಹಿತ್ಯ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತ್ಯ ಅರ್ಧಶತಮಾನ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಲು, ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿಯಿರುವ 20 ರಿಂದ 50 ವರ್ಷದ ಪರಿಶಿಷ್ಟ ಜಾತಿಗೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನ.
ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿ ವೆಬ್ ಸೈಟ್ https://sahithyaacademy.karnataka.gov.in ಮೂಲಕ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ಅಕಾಡೆಮಿ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









