ವೆನ್ಲಾಕ್ ಆಸ್ಪತ್ರೆಯ ಹೊರವಲಯದಲ್ಲಿ ಜಮೀನು ಕಾಯ್ದಿರಿಸಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ



(ನ್ಯೂಸ್ ಕಡಬ) newskadaba.com ಜು. 01. ವೆನ್ಲಾಕ್ ಜಿಲ್ಲಾಸ್ಪತ್ರೆಯ ಭವಿಷ್ಯದ ಅಭಿವೃದ್ದಿ ದೃಷ್ಟಿಯಿಂದ ನಗರದ ಕೇಂದ್ರಭಾಗದ ಹೊರವಲಯದಲ್ಲಿ ಜಮೀನು ಕಾಯ್ದಿರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಅವರು ಸೋಮವಾರದಂದು ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.







ಸಭೆಯಲ್ಲಿ ಶಾಸಕ ಹರೀಶ್ ಪೂಂಜಾ ಅವರು ವಿಷಯ ಪ್ರಸ್ತಾಪಿಸಿ, ವೆನ್‌ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಪ್ರಸ್ತುತ ಇರುವ ಜಮೀನಿನಲ್ಲಿ ವಿವಿಧ ಕಟ್ಟಡಗಳು ತುಂಬಿದ್ದು, ಭವಿಷ್ಯದ ವಿಸ್ತರಣೆ ಹಾಗೂ ಹೊಸ ಅಭಿವೃದ್ಧಿ ಯೋಜನೆಗಳಿಗೆ ಸ್ಥಳಾವಕಾಶದ ಕೊರತೆ ಎದುರಾಗಬಹುದು.






 

ಈ ನಿಟ್ಟಿನಲ್ಲಿ ನಗರ ಸಂಪರ್ಕಿಸುವ ಹೆದ್ದಾರಿಯ ಸಮೀಪ ಜಾಗ ಕಾಯ್ದಿರಿಸುವಂತೆ ಅಗ್ರಹಿಸಿದರು. ಇದಕ್ಕೆ ಸ್ಪಂದಿಸಿದ ಸಚಿವರು, ಈ ಬಗ್ಗೆ ಜಮೀನು ಗುರುತಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

error: Content is protected !!
Scroll to Top