ನಂದಿಗಿರಿಧಾಮ, ಸ್ಕಂದಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ-ಡಿಸಿ ಆದೇಶ



(ನ್ಯೂಸ್ ಕಡಬ) newskadaba.com ಜು. 02. ಇಂದಿನಿಂದ ನಾಳೆ ಬೆಳಗ್ಗೆ ಆರು ಗಂಟೆಯವರೆಗೆ ನಂದಿ ಬೆಟ್ಟ ಮತ್ತು ಸ್ಕಂದಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಎನ್‌ ರವೀಂದ್ರ ಆದೇಶ ಹೊರಡಿಸಿದ್ದಾರೆ.







 

ಜುಲೈ 3 ರ ಬೆಳಗ್ಗೆ 6 ಗಂಟೆಯವರೆಗೆ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.






ನಂದಿಬೆಟ್ಟದಲ್ಲಿ ಇಂದು (ಜು.02) ರಾಜ್ಯ ಸಚಿವ ಸಂಪುಟ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಪ್ರವಾಸಿಗರಿಗೆ ಹಾಗೂ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

error: Content is protected !!
Scroll to Top