(ನ್ಯೂಸ್ ಕಡಬ) newskadaba.com ಜು. 04. ಕಾಣೆಯಾಗಿದ್ದ ಯುವಕನೋರ್ವನ ಮೃತದೇಹ ಉಚ್ಚಿಲ ರೈಲ್ವೆ ಗೇಟ್ ಬಳಿಯ ರೈಲ್ವೇ ಹಳಿಗಳ ಮೇಲೆ ಶುಕ್ರವಾರದಂದು ಬೆಳಗ್ಗೆ ಪತ್ತೆಯಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ.
ಮೃತ ಯುವಕನನ್ನು ಕೋಟೆಕಾರ್ ಬೀರಿ ನಿವಾಸಿ ಮೋಹನ್ದಾಸ್ ಅಮೀನ್ ಅವರ ಪುತ್ರ ತೇಜಸ್ (25) ಎಂದು ಗುರುತಿಸಲಾಗಿದೆ.
ವರದಿಗಳ ಪ್ರಕಾರ, ತೇಜಸ್ ಜುಲೈ 2ರಂದು ರಾತ್ರಿ ತನ್ನ ಕೋಣೆಯಿಂದ ಕಾಣೆಯಾಗಿದ್ದು, ತೇಜಸ್ ಕಾಣೆಯಾದ ಬಳಿಕ ಅವರ ತಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಇದೀಗ ಇಂದು ಬೆಳಿಗ್ಗೆ, ತೇಜಸ್ ಮೃತದೇಹವು ಉಚ್ಚಿಲ ಸಮೀಪದ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.
ಈ ಬಗ್ಗೆ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆತ್ಮಹತ್ಯೆ ಶಂಕೆಯ ಮೇಲೆ ತನಿಖೆ ನಡೆಸುತ್ತಿದ್ದಾರೆ. ಸಾವಿಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.








