‘ಒಬಿಸಿ ವರ್ಗಗಳಿಗೆ ಶೈಕ್ಷಣಿಕ, ರಾಜಕೀಯದಲ್ಲಿ ಶೇ.50 ರಷ್ಟು ಮೀಸಲಾತಿ’- ಸಿಎಂ ಸಿದ್ದರಾಮಯ್ಯ



(ನ್ಯೂಸ್ ಕಡಬ) newskadaba.com, ಜು.16. ಹಿಂದುಳಿದ ವರ್ಗಗಳಿಗೆ ಶೈಕ್ಷಣಿಕ, ಸೇವೆ ಹಾಗೂ ರಾಜಕೀಯ ವಲಯದಲ್ಲಿ ಶೇಕಡಾ 50 ರಷ್ಟು ಮೀಸಲಾತಿ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.







ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಸಮಿತಿ ಮಂಡಳಿ ಸಭೆಯಲ್ಲಿ ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗಗಳ ಬಗ್ಗೆ ಮತ್ತು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಜಾತಿಗಣತಿ ವಿಚಾರಗಳ ಬಗ್ಗೆ ಮೂರು ನಿರ್ಣಯಗಳನ್ನು ತೆಗೆದುಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.






ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಸಭೆಯಲ್ಲಿ ಕೈಗೊಂಡ ಮೂರು ನಿರ್ಣಯಗಳನ್ನು ತಿಳಿಸಿದ್ದಾರೆ.
*ರಾಷ್ಟ್ರದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಉದ್ಯೋಗ, ರಾಜಕೀಯ ಸ್ಥಿತಿ ಬಗ್ಗೆ ಸಂಪೂರ್ಣ ಗಣತಿ ಆಗಬೇಕು.
*ಹಿಂದುಳಿದ ವರ್ಗಗಳಿಗೆ ಶೈಕ್ಷಣಿಕ, ಸೇವೆ ಹಾಗೂ ರಾಜಕೀಯ ವಲಯದಲ್ಲಿ ಶೇಕಡಾ 50 ರಷ್ಟು ಮೀಸಲಾತಿ ನೀಡಬೇಕು.
*ಖಾಸಗಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಆರ್ಟಿಕಲ್ 15(5) ಪ್ರಕಾರ ಮೀಸಲಾತಿ ನೀಡಬೇಕು.

ಹಿಂದುಳಿದ ವರ್ಗಗದವರ ಅಭಿವೃದ್ಧಿ ನಮ್ಮ ಉದ್ದೇಶವಾಗಿದ್ದು, ಸಾಮಾಜಿಕ ನ್ಯಾಯ ಕೊಡುವುದು ಮುಖ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ನಾವು ಹೆಜ್ಜೆ ಇಡುತ್ತಿದ್ದೇವೆ. ಸಂವಿಧಾನ ಉದ್ದೇಶದಂತೆ ಸಮಾನತೆಯ ಸಮಾಜ ನಿರ್ಮಾಣ ಮಾಡಬೇಕು. ನ್ಯಾಯ ಯೋಧ ಅಡಿಯಲ್ಲಿ ಕಾಂಗ್ರೆಸ್ ಪಕ್ಷವು ಮುನ್ನಡೆಯುತ್ತಿದೆ. ಶಿಕ್ಷಣ, ಆರ್ಥಿಕ, ಸಾಮಾಜಿಕ ಅಂಶದ ಮೇಲೆ ಜಾತಿಗಣತಿ ನಡೆಯಬೇಕು ಎಂದರು.

error: Content is protected !!
Scroll to Top