(ನ್ಯೂಸ್ ಕಡಬ) newskadaba.com, ಜು. 30. ಧರ್ಮಸ್ಥಳದಲ್ಲಿ ನೂರೂರು ಶವಗಳ ಹೂತಿಟ್ಟ ಪ್ರಕರಣ ಸಂಬಂಧ ಎಸ್ಐಟಿ ತನಿಖೆ ತೀವ್ರಗೊಂಡಿದೆ. ನೇತ್ರಾವತಿ ಸ್ನಾನಘಟ್ಟ ಸಮೀಪದ ಕಾಡಿನಲ್ಲಿ ಅನಾಮಿಕ ದೂರುದಾರ ಹಲವು ಶವ ಹೂತಿಟ್ಟ ಸ್ಥಳಗಳನ್ನು ಗುರುತಿಸಿದ್ದಾನೆ. ಈ ಪೈಕಿ ಮೊದಲ ಸ್ಥಳವನ್ನು ನಿನ್ನೆ (ಜು.29)ರಂದು ಅಗೆಯಲಾಗಿತ್ತು. ಆದರೆ ಯಾವುದೇ ಕಳೇಬರ ಪತ್ತೆಯಾಗಿರಲಿಲ್ಲ. ಇಂದು (ಜು.30) ದೂರುದಾರ ಗುರುತಿಸಿದ 2ನೇ ಸ್ಥಳ ಅಗೆಯಲಾಗಿದೆ. ಆದರೆ ಎರಡನೇ ಸ್ಥಳದಲ್ಲೂ ಯಾವುದೇ ಕಳೇಬರ ಪತ್ತೆಯಾಗಿಲ್ಲ.
ಧರ್ಮಸ್ಥಳ ಕೇಸ್: ಅನಾಮಿಕ ಗುರುತಿಸಿದ 2ನೇ ಸ್ಥಳದಲ್ಲೂ ಕಳೇಬರ ಇಲ್ಲ








