ಹೈಕಮಾಂಡ್ ಸೂಚನೆ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಜಣ್ಣ ರಾಜೀನಾಮೆ



(ನ್ಯೂಸ್‌ ಕಡಬ) newskadaba.com, ಆ.11 : ಹೈಕಮಾಂಡ್ ಸೂಚನೆಯ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಸಹಕಾರಿ ಸಚಿವ ಕೆಎನ್ ರಾಜಣ್ಣ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಣ್ಣ ಅವರ ಪುತ್ರ ರಾಜೇಂದ್ರ ಅವರು ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯಗೆ ನೀಡಿದ್ದಾರೆ.







ಆರಂಭದಲ್ಲಿ ಸೆಪ್ಟೆಂಬರ್ ಕ್ರಾಂತಿಯ ಹೇಳಿಕೆ ನೀಡಿ ರಾಜಣ್ಣ ಸಂಚಲನ ಮೂಡಿಸಿದ್ದರು. ರಾಹುಲ್ ಗಾಂಧಿ ಮತಗಳ್ಳತನ ಆರೋಪ ಮಾಡಿದ ನಂತರ ರಾಜಣ್ಣ ನಮ್ಮ ಅವಧಿಯಲ್ಲಿ ಮತಪಟ್ಟಿ ಸಿದ್ಧವಾಗಿತ್ತು ಎಂದು ತಿಳಿಸಿದ್ದರು.






ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಮತದಾರರ ಪಟ್ಟಿ ಸಿದ್ಧಪಡಿಸಲಾಗಿದೆ. ಆಗ ಎಲ್ಲರು ಕಣ್ಣುಮುಚ್ಚಿ ಕುಳಿತಿದ್ದರೇ ಎಂದು ರಾಜಣ್ಣ ಪ್ರಶ್ನಿಸಿದ್ದರು. ರಾಜಣ್ಣ ಅವರ ಈ ಹೇಳಿಕೆ ಕಾಂಗ್ರೆಸ್‌ಗೆ ಮುಜುಗರ ತಂದಿತ್ತು. ಈ ಹೇಳಿಕೆಯ ಬೆನ್ನಲ್ಲೇ ಹೈಕಮಾಂಡ್ ರಾಜಣ್ಣಗೆ ರಾಜೀನಾಮೆ ಸಲ್ಲಿಸಲು ಸೂಚಿಸಿತ್ತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಸಿಎಂಗೆ ಕರೆ ಮಾಡಿ ರಾಜೀನಾಮೆ ಪಡೆಯುವಂತೆ ಸೂಚನೆ ನೀಡಿದ ಬೆನ್ನಲ್ಲೇ ರಾಜಣ್ಣ ರಾಜೀನಾಮೆ ನೀಡಿದ್ದಾರೆ.

error: Content is protected !!
Scroll to Top