ಕರಾವಳಿಯಲ್ಲಿ ಆ.14 ರಿಂದ 19 ರವರೆಗೆ ಭಾರೀ ಮಳೆ ಸಾಧ್ಯತೆ- ಯೆಲ್ಲೋ ಅಲರ್ಟ್‌ ಘೋಷಣೆ



(ನ್ಯೂಸ್‌ ಕಡಬ) newskadaba.com ಆ.14 ಮಂಗಳೂರು-ಉಡುಪಿ: ಕರಾವಳಿ ಪ್ರದೇಶದಲ್ಲಿ ಮುಂಗಾರು ಮತ್ತೆ ತೀವ್ರಗೊಳ್ಳುವ ನಿರೀಕ್ಷೆಯಿದ್ದು, ಆಗಸ್ಟ್ 14 ರಿಂದ 19 ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ)  ಯೆಲ್ಲೋ ಅಲರ್ಟ್  ಘೋಷಣೆ ಮಾಡಿದೆ. ಭೀಕರ ಗಾಳಿ ಮಳೆಯಾಗುವ ಸಾಧ್ಯತೆಯಿದೆ.







(ಆ.13) ಬುಧವಾರದಂದು ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡದ ಹಲವು ಭಾಗಗಳಲ್ಲಿ   ಸಾಮಾನ್ಯ ಮಳೆಯಾಗಿದ್ದು, ಗರಿಷ್ಠ ತಾಪಮಾನ 26.9°C ಮತ್ತು ಕನಿಷ್ಠ ತಾಪಮಾನ 22.9°C ಆಗಿತ್ತು.






ಉಡುಪಿ ಜಿಲ್ಲೆಯಲ್ಲೂ ಬುಧವಾರ ಸಾಧಾರಣ ಮಳೆಯಾಗಿದ್ದು, ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಪಡುಬಿದ್ರಿ, ಕಾಪು, ಶಿರ್ವ, ಕಟಪಾಡಿ, ಉಡುಪಿ, ಮಲ್ಪೆ, ಬ್ರಹ್ಮಾವರ, ಕೋಟ, ಮಣಿಪಾಲ, ಹೆಬ್ರಿ, ಕಾರ್ಕಳ, ಕುಂದಾಪುರ ಮತ್ತು ಬೈಂದೂರು ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಮಳೆಯಾದ ಬಗ್ಗೆ ವರದಿಯಾಗಿದೆ.

error: Content is protected !!
Scroll to Top