(ನ್ಯೂಸ್ ಕಡಬ) newskadaba.com, ಆ.21: ನನ್ನ ಜೀವಕ್ಕೆ ಹಾನಿಯಾದರೆ ರಾಜ್ಯ ಸರ್ಕಾರ ಮತ್ತು ಇಡೀ ಬಿಜೆಪಿ ನಾಯಕರು ಹೊಣೆ ಎಂದು ಸಾಮಾಜಿಕ ಕಾರ್ಯಕರ್ತ ಮಹೇಶ್ ತಿಮರೋಡಿ ಹೇಳಿದರು.
ಬಿ.ಎಲ್.ಸಂತೋಷ್ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದ ನಂತರ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಸೌಜನ್ಯಳಿಗೆ ನ್ಯಾಯ ಸಿಗಬೇಕು ಎನ್ನುವುದೇ ನಮ್ಮ ಉದ್ದೇಶ. ಈ ಹೋರಾಟ ಮುಂದುವರಿಯಬೇಕು. ಅತ್ಯಾಚಾರಿಗಳ ಬಂಧನ ಆಗಬೇಕು. ಎಸ್ಐಟಿ ತನಿಖೆ ಮುಂದುವರಿಯಬೇಕು. ಬಿಜೆಪಿಗರ ಪಾಪದ ಕೂಸು ಸರ್ವನಾಶವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾನು ಈಗ ಪೊಲೀಸ್ ಠಾಣೆಗೆ ಹೋಗುತ್ತೇನೆ. ಪೊಲೀಸರಿಗೆ ಸೂಕ್ತವಾದ ಮಾಹಿತಿ ನೀಡುತ್ತೇನೆ. ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.












