(ನ್ಯೂಸ್ ಕಡಬ) newskadaba.com ಆ. 29. ವಾಯುಭಾರ ಕುಸಿತದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಹಲವೆಡೆ ಹಾನಿಯಾಗಿರುವ ಕುರಿತು ವರದಿಯಾಗಿದೆ.
ನಿರಂತರ ಮಳೆಯಿಂದಾಗಿ ಬಂಟ್ವಾಳ ಮೂಡ ನಡುಗೋಡು ಗ್ರಾಮದ ದಂಡೆಮಜಲು ಎಂಬಲ್ಲಿ ರಾಮಣ್ಣ ನಾಯಕ್ ಎಂಬವರ ಮನೆ ಮಳೆಯಿಂದ ತೀವ್ರ ಹಾನಿಯಾಗಿದೆ. ಸದ್ಯ ಅವರು ಪಕ್ಕದಲ್ಲೇ ಇರುವ ಸಹೋದರನ ಮನೆಗೆ ಸ್ಥಳಾಂತರಗೊಂಡಿದ್ದಾರೆ.
ಅಮ್ಟಾಡಿ ಗ್ರಾಮದ ಪೆದಮಲೆ ಎಂಬಲ್ಲಿ ಬಂಟ್ವಾಳ- ಸಿದ್ದಕಟ್ಟೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ಬದಿಯಲ್ಲಿ ಮಣ್ಣು ಕುಸಿದಿದೆ. ಈ ಬಗ್ಗೆ ಪಿಡಬ್ಲ್ಯೂಡಿ ಇಲಾಖೆಗೆ ಕಂದಾಯ ಅಧಿಕಾರಿಗಳು ಮಾಹಿತಿ ನೀಡಿದ ಹಿನ್ನೆಲೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ತಾತ್ಕಾಲಿಕ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.









