ಪುತ್ತೂರು ಜಾತ್ರೆ: ನಿಷೇಧಾಜ್ಞೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.18. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ  ಜಾತ್ರಾ ಮಹೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಪುತ್ತೂರು ನಗರ ಪ್ರದೇಶವು ಮತೀಯವಾಗಿ ಸೂಕ್ಷ್ಮ ಪ್ರದೇಶವಾಗಿದ್ದು, ಶಾಂತಿ ಕಾಪಾಡುವ ಹಿತದೃಷ್ಠಿಯಿಂದ ಎಪ್ರಿಲ್ 18 ರ ಮಧ್ಯರಾತ್ರಿಯವರೆಗೆ ಪುತ್ತೂರು ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವೈನ್ ಶಾಪ್ ಮತ್ತು ಬಾರ್‍ಗಳನ್ನು ಮುಚ್ಚಲು ಅಬಕಾರಿ ಕಾಯ್ದೆ 1965 ಸೆಕ್ಷನ್ 21(1)ರ ಅಡಿಯಲ್ಲಿ ದತ್ತವಾದ ಅಧಿಕಾರವನ್ನು ಚಲಾಯಿಸಿ, ದ.ಕ ಜಿಲ್ಲಾಧಿಕಾರಿ, ಹಾಗೂ ಜಿಲ್ಲಾ ದಂಢಾಧಿಕಾರಿ ಆದೇಶಿಸಿದ್ದಾರೆ.

Also Read  ಹಳೆಯ ಪೊಲೀಸ್ ವಸತಿಗೃಹದ ಸಾಮಾಗ್ರಿಗಳ ಬಹಿರಂಗ ಹರಾಜು ಪ್ರಕ್ರಿಯೆ

error: Content is protected !!
Scroll to Top