ಕಾರು- ಟ್ಯಾಂಕರ್ ನಡುವೆ ಭೀಕರ ಅಪಘಾತ ಮಹಿಳೆ ಮೃತ್ಯು, ಇಬ್ಬರು ಗಂಭೀರ



(ನ್ಯೂಸ್ ಕಡಬ) newskadaba.com ಸೆ. 03. ಕಾರು ಮತ್ತು ಟ್ಯಾಂಕರ್ ಮಧ್ಯೆ ಉಂಟಾದ ಭೀಕರ ಅಪಘಾತದಲ್ಲಿ ಮಹಿಳೆಯೋರ್ವರು ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಸಮೀಪ ಕಡೆಪಾಲ ಎಂಬಲ್ಲಿ ನಡೆದಿದೆ.





ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಟ್ಯಾಂಕರ್ ಮತ್ತು ಸುಳ್ಯ ಭಾಗದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಮಧ್ಯೆ ಅಪಘಾತ ಸಂಭವಿಸಿದೆನ್ನಲಾಗಿದೆ.






ಪರಿಣಾಮ ಕಾರಿನಲ್ಲಿದ್ದ ಮಹಿಳೆ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತಕ್ಕೆ ತುತ್ತಾದ ಕಾರು ಕೊಡಗು ಸಿದ್ಧಾಪುರದ ನೆಲ್ಲಿಹುದಿಕೇರಿಯದ್ದು ಎನ್ನಲಾಗಿದೆ. ಗಾಯಾಳುಗಳನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!
Scroll to Top