ಪಡೆದುಕೊಂಡಿದೆ. ನೇಪಾಳದ ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ ಬೆನ್ನಲ್ಲೇ ನೇಪಾಳದಲ್ಲಿ ಹಿಂಸಾಚಾರ ಮತ್ತು ಸಾಮೂಹಿಕ ಜೈಲುದಾಳಿ ನಡೆದಿದೆ.
ಪಶ್ಚಿಮ ನೇಪಾಳದ ಒಂದು ಸುಧಾರಣಾ ಗೃಹದಲ್ಲಿ ಭದ್ರತಾ ಪಡೆಗಳೊಂದಿಗಿನ ಘರ್ಷಣೆಯಲ್ಲಿ 5 ಬಾಲಾಪರಾಧಿಗಳು ಮೃತಪಟ್ಟಿದ್ದಾರೆ. ಪ್ರತಿಭಟನೆಗಳ ಮಧ್ಯೆ ನೇಪಾಳ ದೇಶಾದ್ಯಂತ 7,000ಕ್ಕೂ ಹೆಚ್ಚು ಕೈದಿಗಳು ಜೈಲುಗಳಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ.
ನೇಪಾಳದಲ್ಲಿ ನಡೆದ ಪ್ರತಿಭಟನೆಗಳಿಂದಾಗಿ ಕಾನೂನು ಮತ್ತು ಸುವ್ಯವಸ್ಥೆ ಬಿಕ್ಕಟ್ಟು ಉಂಟಾಗಿದೆ. ನಿಯಂತ್ರಣವನ್ನು ಪುನಃಸ್ಥಾಪಿಸಲು ನೇಪಾಳ ಸೇನೆಯು ರಾಷ್ಟ್ರವ್ಯಾಪಿ ನಿರ್ಬಂಧಿತ ಆದೇಶಗಳನ್ನು ವಿಧಿಸಲು ಮತ್ತು ಹಲವಾರು ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಗೊಳಿಸಿತು. ಬಂಕೆ ಜಿಲ್ಲೆಯಲ್ಲಿನ ಘರ್ಷಣೆಯಲ್ಲಿ ಬಾಲಾಪರಾಧಿ ಕೈದಿಗಳನ್ನು ಗುಂಡಿಕ್ಕಿ ಕೊಲ್ಲಲಾಯಿತು.
ಬಂಕೆ ಜಿಲ್ಲೆಯ ಬೈಜ್ನಾಥ್ ಗ್ರಾಮೀಣ ಪುರಸಭೆ-3ರಲ್ಲಿರುವ ನೌಬಾಸ್ತಾ ಸುಧಾರಣಾ ಗೃಹದಲ್ಲಿ ಮಂಗಳವಾರ ರಾತ್ರಿ ಐದು ಬಾಲಾಪರಾಧಿಗಳು ಮೃತಪಟ್ಟಿದ್ದಾರೆ. ಬಂಧಿತರು ಕಾವಲುಗಾರರಿಂದ ಶಸ್ತ್ರಾಸ್ತ್ರಗಳನ್ನು ಕಸಿದುಕೊಳ್ಳಲು ಪ್ರಯತ್ನಿಸಿದಾಗ ಘರ್ಷಣೆ ಭುಗಿಲೆದ್ದಿತು. ಜೈಲಿನಲ್ಲಿರುವ ಸಿಬ್ಬಂದಿಯ ಶಸ್ತ್ರಾಸ್ತ್ರಗಳನ್ನು ಕೈದಿಗಳು ಕಸಿದುಕೊಳ್ಳಲು ಪ್ರಯತ್ನಿಸಿದಾಗ ಉಂಟಾದ ಘರ್ಷಣೆಯಲ್ಲಿ ಪೊಲೀಸರು ಗುಂಡು ಹಾರಿಸಿದಾಗ 5 ಬಾಲಾಪರಾಧಿಗಳು ಸಾವನ್ನಪ್ಪಿದರು ಮತ್ತು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.














