ಆಲಂಕಾರು: ಗುರುದೇವಾನಂದ ಸ್ವಾಮೀಜಿಯವರ 57ನೇ ಜನ್ಮದಿನೋತ್ಸವ

(ನ್ಯೂಸ್ ಕಡಬ) newskadaba.com ಆಲಂಕಾರು, ಜು.06. ಒಡಿಯೂರು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್‌, ಒಡಿಯೂರು ಗ್ರಾಮ ವಿಕಾಸ ಯೋಜನೆ ಘಟ ಸಮಿತಿ ಕುಂಡಾಜೆ ರಾಮಕುಂಜ ಇವುಗಳ ಸಂಯುಕ್ತ ಆಶ್ರಯದಲ್ಲಿ ಗುರುದೇವಾನಂದ ಸ್ವಾಮೀಜಿಯವರ 57ನೇ ಜನ್ಮದಿನೋತ್ಸವದ(ಗ್ರಾಮೋತ್ಸವ) ಪ್ರಯುಕ್ತವಾಗಿ ಸಂಘದ ಸದಸ್ಯರಿಂದ ಸ್ವಚ್ಚತಾ ಕಾರ್ಯಕ್ರಮ ಮತ್ತು ಒಂದು ದಿನದ ಶ್ರಮದಾನವು ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು.

ಶಾಲಾ ಆವರಣವನ್ನು ಸ್ವಚ್ಚತೆ ಮಾಡುವ ಮೂಲಕ ಶ್ರಮದಾನವನ್ನು ಪ್ರಾರಂಭಿಸಲಾಯಿತು. ಬಳಿಕ ಶಾಲೆಗೆ ಕೈತೋಟ ರಚನೆ ಮತ್ತು ಶಾಲಾ ಆವರಣದಲ್ಲಿ ತರಕಾರಿ ಗಿಡಗಳನ್ನು ನೆಟ್ಟು ತೆಂಗಿನ ಗಿಡಗಳಿಗೆ ಸೊಪ್ಪು ಗೊಬ್ಬರಗಳನ್ನು ಹಾಕುವ ಕೆಲಸವನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಘಟ ಸಮಿತಿಯ ಅಧ್ಯಕ್ಷ ಮೋನಪ್ಪ ಕೆ., ಉಪಾಧ್ಯಕ್ಷೆ ಪರಮೇಶ್ವರೀ, ಸಂಘಟನಾ ಕಾರ್ಯದರ್ಶಿ ಗುರುವಪ್ಪ, ನಿಕಟಪೂರ್ವ ಅಧ್ಯಕ್ಷ ದಿನೇಶ್ ಗಾಣಂತಿ, ಭಾಗೀರಥಿ, ಹರೀಶ್, ದೀಪಿಕಾ, ರಾಮಕುಂಜ ಗ್ರಾಮ ಪಂಚಾಯತ್ ಸದಸ್ಯೆ ವಾರಿಜ, ಶಾಲಾ ಮುಖ್ಯ ಶಿಕ್ಷಕರಾದ ಕೆ.ಪಿ. ನಿಂಗರಾಜು, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಅಬೂಬಕ್ಕರ್, ಶಾಲಾ ಶಿಕ್ಷಕ ವೃಂದ ಮೊದಲಾದವರು ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group