ಬೆಂಗಳೂರು: ಆಟೋ & ಕಾರಿಗೆ ಟ್ಯಾಂಕರ್ ಡಿಕ್ಕಿ, ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು



(ನ್ಯೂಸ್ಕಡಬ) newskadaba.com,  ಸೆ.13 ಬೆಂಗಳೂರು : ನಿನ್ನೆ(ಸೆ.12)  ಹಾಸನದಲ್ಲಿ ನಡೆದ ಭೀಕರ ಟ್ಯಾಂಕರ್ ದುರಂತದ ನೆನಪು ಮಾಸುವ ಮುನ್ನವೇ, ಬೆಂಗಳೂರಿನಲ್ಲಿ ಇನ್ನೊಂದು ಟ್ಯಾಂಕರ್ ಅಪಘಾತ ನಡೆದಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಟ್ಯಾಂಕರ್ ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸುಮ್ಮನಹಳ್ಳಿಯ ಜಂಕ್ಷನ್ ರಸ್ತೆಯಲ್ಲಿ ನಡೆದಿದೆ.ರಿಕ್ಷಾ, ಕಾರಿಗೆ ಟ್ಯಾಂಕರ್ ಡಿಕ್ಕಿಯಾಗಿ ರಿಕ್ಷಾದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.







ಆಟೋದಲ್ಲಿದ್ದ ಡಿಯೇಸು ಹಾಗೂ ಜನಿಫರ್ ಅವರು ಸ್ಥಳದಲ್ಲಿ ಸಾವನಪ್ಪಿದ್ದು, ಕಾರಿನಲ್ಲಿ ಇದ್ದವರಿಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಟ್ಯಾಂಕರ್ ಡಿಕ್ಕಿ ಆದ ರಭಸಕ್ಕೆ ಆಟೋ 2 ತುಂಡುಗಳಾಗಿದ್ದು, ಲಾರಿ ಬ್ರೇಕ್ ಫೇಲ್ ಆಗಿ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.






ನಿನ್ನೆ ಹಾಸನದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಂಭ್ರಮದಲ್ಲಿದ್ದವರ ಮೇಲೆ ಟ್ಯಾಂಕರ್ ಹರಿದು, 9 ಮಂದಿ ಸತ್ತಿದ್ದರು. 20ಕ್ಕೂ ಹೆಚ್ಚು ಮಂದಿ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರಕಾರಗಳು ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿವೆ.

error: Content is protected !!
Scroll to Top