ನವದೆಹಲಿ: ರೈಲುಗಳಿಂದ ಕ್ಷಿಪಣಿಗಳನ್ನು ಉಡಾಯಿಸಬಹುದಾದ ಅಗ್ನಿ ಪ್ರೈಂ ಕ್ಷಿಪಣಿ ಪರೀಕ್ಷೆ ಯಶಸ್ವಿ



(ನ್ಯೂಸ್‌ ಕಡಬ) newskadaba.com,  ಸೆ.25 ನವದೆಹಲಿ : ಭಾರತವು ರಕ್ಷಣಾ ವಲಯದಲ್ಲಿ ಈಗ ರೈಲುಗಳಿಂದ ಕ್ಷಿಪಣಿಗಳನ್ನು ಉಡಾಯಿಸುವ ಸಾಮರ್ಥ್ಯವನ್ನು ಹೊಂದಿದೆ. 2,000 ಕಿಲೋಮೀಟರ್‌ಗಳ ವ್ಯಾಪ್ತಿಯನ್ನು ಹೊಂದಿರುವ ಅಗ್ನಿ-ಪ್ರೈಂ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು.







ಈ ಸಾಧನೆಗಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಡಿಆರ್‌ಡಿಒ ಮತ್ತು ಸಶಸ್ತ್ರ ಪಡೆಗಳನ್ನು ಅಭಿನಂದಿಸಿದರು. ಅಗ್ನಿ-ಪ್ರೈಂ ಕ್ಷಿಪಣಿಯನ್ನು ರೈಲಿನಿಂದ ಯಶಸ್ವಿಯಾಗಿ ಪರೀಕ್ಷಿಸಿದ್ದು ಇದೇ ಮೊದಲು.ಭಾರತವು ರೈಲು ಆಧಾರಿತ ಮೊಬೈಲ್ ಲಾಂಚರ್ ವ್ಯವಸ್ಥೆಯಿಂದ ಮಧ್ಯಮ ಶ್ರೇಣಿಯ ಅಗ್ನಿ-ಪ್ರೈಂ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಕ್ಸ್​​ನಲ್ಲಿ ಪೋಸ್ಟ್ನಲ್ಲಿ ತಿಳಿಸಿದ್ದಾರೆ.






ಈ ಪರೀಕ್ಷೆಯನ್ನು ಡಿಆರ್‌ಡಿಒ, ಎಸ್‌ಎಫ್‌ಸಿ ಮತ್ತು ಭಾರತೀಯ ಸಶಸ್ತ್ರ ಪಡೆಗಳು ಜಂಟಿಯಾಗಿ ನಡೆಸಿವೆ. ಪ್ರಧಾನಿ ಮೋದಿ ಅವರು ತಮ್ಮ ಅಭಿನಂದನೆಗಳನ್ನು ಟ್ವೀಟ್ ಮಾಡಿದ್ದಾರೆ. ಅಗ್ನಿ-ಪ್ರೈಂನ ಯಶಸ್ವಿ ಪರೀಕ್ಷೆಯು ಭಾರತವನ್ನು ರೈಲು ಆಧಾರಿತ ಕ್ಯಾನಿಸ್ಟರ್ ಉಡಾವಣಾ ವ್ಯವಸ್ಥೆಯನ್ನು ಹೊಂದಿರುವ ಆಯ್ದ ದೇಶಗಳ ಗುಂಪಿನಲ್ಲಿ ಸೇರಿಸಿದೆ ಎಂದು ಅವರು ಹೇಳಿದ್ದಾರೆ. ಈ ಪರೀಕ್ಷೆಯು ಭಾರತದ ಆತ್ಮನಿರ್ಭರ ಭಾರತ ಉಪಕ್ರಮದ ಭಾಗವಾಗಿದೆ.

 

error: Content is protected !!
Scroll to Top