ಪಾಲ್ತಾಡಿ: ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ

(ನ್ಯೂಸ್ ಕಡಬ) newskadaba.com ಸವಣೂರು, ಜು.06. ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣೆ ಮತ್ತು ದಾನಿಗಳಿಂದ ಒಂದನೇ ತರಗತಿಗೆ ಸೇರ್ಪಡೆಯಾದ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಸಮಾರಂಭ ಇತ್ತೀಚೆಗೆ ನಡೆಯಿತು.

ಶಾಲಾಭಿವೃದ್ದಿ ಸಮಿತಿ ಸದಸ್ಯ ಉಚಿತ ಸಮವಸ್ತ್ರ ವಿತರಿಸಿದರು. ಇದೇ ಸಂದರ್ಭದಲ್ಲಿ ಒಂದನೇ ತರಗತಿಗೆ ಸೇರ್ಪಡೆಯಾದ ಮಕ್ಕಳಿಗೆ ಪ್ರೋತ್ಸಾಹದಾಯಕವಾಗಿ ಕೆಯ್ಯೂರು ಸ.ಪ್ರೌ.ಶಾಲಾ ಮುಖ್ಯಗುರು ವಿನೋದ್ ಕುಮಾರ್ ಕೆ.ಎಸ್ ಮತ್ತು ಮಂಜುನಾಥನಗರ ಹಿ.ಪ್ರಾ.ಶಾಲಾ ಶಿಕ್ಷಕಿ ನಂದಿನಿ ಆರ್. ದೇವಾಡಿಗ ದಂಪತಿ ನೀಡಿದ ಶಾಲಾ ಬ್ಯಾಗನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷೆ ವಿಮಲಾ ವಹಿಸಿದ್ದರು. ಈ ಸಂಧರ್ಭದಲ್ಲಿ ಶಾಲಾಭಿವೃದ್ದಿ ಸಮಿತಿ ಸದಸ್ಯರಾದ ಲತಾ, ಸವಿತಾ, ಶಿಕ್ಷಕರಾದ ನಂದಿನಿ ಆರ್. ದೇವಾಡಿಗ, ಆರತಿ ಎಸ್. ಉಪಸ್ಥಿತರಿದ್ದರು.  ಶಾಲಾ ಮುಖ್ಯಗುರು ಕುಸುಮಾ ಐ.ಟಿ ಸ್ವಾಗತಿಸಿ, ಶಿಕ್ಷಕಿ ಆಗ್ನೇಸ್ ಪ್ರೆಸಿಲ್ಲಾ ಪಾೖಸ್ ವಂದಿಸಿದರು.

Also Read  ಉಡುಪಿ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ➤ ಆರೋಪಿ ನಿರಂಜನ್ ಭಟ್ ಜಾಮೀನು ಅರ್ಜಿ ಹೈಕೋರ್ಟ್‍ನಲ್ಲಿ ತಿರಸ್ಕøತ

error: Content is protected !!
Scroll to Top