(ನ್ಯೂಸ್ ಕಡಬ) newskadaba.com ಅ. 16. ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ(65) ಅವರು ಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ.
ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ ಅಮ್ಮಣ್ಣಾಯ ‘ರಸರಾಗ ಚಕ್ರವರ್ತಿ’ ಎಂಬ ಬಿರುದು ಹೊಂದಿದ್ದರು.
ಎಡನೀರು ಮಠದ ಪರಮಶಿಷ್ಯರಾದ ಅಮ್ಮಣ್ಣಾಯರು ತಮ್ಮ ಜೀವನ ಅತೀ ಹೆಚ್ಚು ಯಕ್ಷಗಾನ ಭಾಗವತಿಕೆಯನ್ನು ಎಡನೀರು ಮಠದ ಮೇಳ ಹಾಗೂ ಎಡನೀರು ಕ್ಷೇತ್ರದಲ್ಲೇ ಮಾಡಿರುವುದು ವಿಶೇಷ.








