ಬಿಳಿನೆಲೆ ದೇವಸ್ಥಾನದ ಮೂರ್ತಿಗೆ ಪುಸ್ತಕ ತೂಗುಹಾಕಿದ ಕಿರಾತಕರು ► ಭಕ್ತ ವೃಂದದಿಂದ ತೀವ್ರ ಆಕ್ರೋಶ

(ನ್ಯೂಸ್ ಕಡಬ) newskadaba.com ಕಡಬ, ಜು.06. ಇಲ್ಲಿನ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಮಹಾದ್ವಾರದ ಬಳಿಯ ಮೂರ್ತಿಯ ಮೇಲೆ ಪೊಲೀಸ್ ಬೀಟ್ ಗೆ ಸಹಿ ಹಾಕುವ ಪುಸ್ತಕವನ್ನು ನೇತಾಡಿಸಲಾಗಿದ್ದು, ಭಕ್ತರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಬುಧವಾರದಂದು ಭಕ್ತರು ದೇವಸ್ಥಾನಕ್ಕೆ ಆಗಮಿಸಿದಾಗ ಪೊಲೀಸ್ ಬೀಟ್ ಪುಸ್ತಕವನ್ನು ಕಂಡು ಪೊಲೀಸರು ಈ ರೀತಿ ಬೇಜವಾಬ್ದಾರಿಯಿಂದ ಇಟ್ಟಿದ್ದಾರೋ ಅಥವಾ ಕಿಡಿಗೇಡಿಗಳು ಗಲಭೆ ಸೃಷ್ಟಿಸುವ ಉದ್ದೇಶದಿಂದ ಇಟ್ಟಿದ್ದಾರೋ ಎಂದು ಆಕ್ರೋಶಗೊಂಡಿದ್ದಾರೆ. ಭಕ್ತರಲ್ಲೊಬ್ಬರು ಫೊಟೊ ತೆಗೆದು ವಾಟ್ಸಾಪ್ ನಲ್ಲಿ ಹಾಕಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಡಬ ಸಬ್ ಇನ್ಸ್‌ಪೆಕ್ಟರ್ ಪ್ರಕಾಶ್ ದೇವಾಡಿಗ, ಇದು ಪೊಲೀಸರು ಮಾಡಿದ್ದಲ್ಲ. ಪೊಲೀಸರು ಕೊನೆಗೆ ಸ್ಥಳಕ್ಕೆ ಭೇಟಿ ನೀಡಿದ ಬಗ್ಗೆ ಸಹಿ ಇರುತ್ತದೆ. ಎಲ್ಲಾ ದೇವಸ್ಥಾನಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲು ಸೂಚನೆ ನೀಡಲಾಗಿದ್ದು, ಈ ಬಗ್ಗೆ ಪರಿಶೀಲಿಸಲಾಗುವುದು ಎಂದಿದ್ದಾರೆ.

error: Content is protected !!

Join the Group

Join WhatsApp Group