ವಿಮಾ ಏಜೆಂಟ್ ಕೊಲೆ ಮಾಡಿ ಚರಂಡಿಗೆ ಎಸೆದ ಯುವತಿ, ಆಕೆಯ ನಿಶ್ಚಿತ ವರ ಬಂಧನ



(ನ್ಯೂಸ್ಕಡಬ) newskadaba.com,  ..24: ವಿಮಾ ಏಜೆಂಟ್‌ನನ್ನು ಕೊಲೆ ಮಾಡಿ ಆತನ ದೇಹವನ್ನು ಚರಂಡಿಗೆ ಎಸೆದ ಆರೋಪದಲ್ಲಿ ಯುವತಿ ಮತ್ತು ಆಕೆಯ ನಿಶ್ಚಿತ ವರನನ್ನು ಬಂಧಿಸಿದ ಘಟನೆ ಫರಿದಾಬಾದ್‌ನಲ್ಲಿ ನಡೆದಿದೆ.







ಲಕ್ಷ್ಮಿ (29) ಮತ್ತು ಕೇಶವ್ (26) ಅವರನ್ನು ಬಂಧಿತ ಆರೋಪಿಗಳು. ಚಂದರ್ ಕೊಲೆಯಾದ ವ್ಯಕ್ತಿ. ಚಂದರ್ ತನಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಹಿನ್ನೆಲೆ ಕೊಲೆ ಮಾಡಿರುವುದಾಗಿ ಯುವತಿ ಪೊಲೀಸರಿಗೆ ತಿಳಿಸಿದ್ದಾಳೆ.






ಭಾನುವಾರ ಬೆಳಗ್ಗೆ ಚರಂಡಿಯಲ್ಲಿ ಚಂದರ್ ಮೃತದೇಹ ಪತ್ತೆಯಾಗಿತ್ತು. ಚರಂಡಿ ಸಮೀಪವಿದ್ದ ಬೈಕ್‌ನ ನೋಂದಣಿ ಸಂಖ್ಯೆ ಬಳಸಿಕೊಂಡು ಶವದ ಗುರುತು ಪತ್ತೆಮಾಡಲಾಯಿತು. ಫರಿದಾಬಾದ್‌ನಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಪೂರ್ವ ದೆಹಲಿಯ ವಿನೋದ್ ನಗರದಲ್ಲಿ ಚಂದರ್ ವಾಸಿಸುತ್ತಿದ್ದರು ಎಂದು ಪೊಲೀಸರ ತನಿಖೆ ವೇಳೆ ತಿಳದುಬಂದಿದೆ. ಪೊಲೀಸರು ಚಂದರ್ ಅವರ ಕುಟುಂಬವನ್ನು ಸಂಪರ್ಕಿಸಿದರು. ಮೃತದೇಹದ ತಲೆ ಮತ್ತು ಕುತ್ತಿಗೆಯ ಮೇಲೆ ಗಾಯದ ಗುರುತುಗಳಿದ್ದವು. ಚಂದರ್ ಅವರ ಸಹೋದರ ಮದನ್ ಗೋಪಾಲ್ ನೀಡಿದ ದೂರಿನ ಮೇರೆಗೆ, ಕೊಲೆ ಪ್ರಕರಣ ದಾಖಲಿಸಲಾಯಿತು.

ಚಂದರ್ ಅವರಿಗೆ ಐದು ವರ್ಷಗಳಿಂದ ಪರಿಚಯವಿರುವುದಾಗಿ ಆರೋಪಿ ಲಕ್ಷ್ಮಿ ಪೊಲೀಸರ ಬಳಿ ಹೇಳಿದ್ದಾಳೆ. ಇತ್ತೀಚೆಗೆ ಕೇಶವ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಇದರಿಂದ ಚಂದರ್ ಬೇಸರಗೊಂಡಿದ್ದ. ಅವನು ಲಕ್ಷ್ಮಿಯನ್ನು ಬ್ಲ್ಯಾಕ್‌ಮೇಲ್ ಮಾಡಿ ಕೇಶವ್ ಅವರನ್ನು ಮದುವೆಯಾಗಬೇಡಿ ಎಂದು ಹೇಳಿದ್ದ. ಈ ಬ್ಲ್ಯಾಕ್‌ಮೇಲ್‌ನಿಂದ ಬೇಸತ್ತ ಆಕೆ ಮತ್ತು ಕೇಶವ್ ಇಬ್ಬರೂ ಚಂದರ್‌ನನ್ನು ಕೊಲ್ಲಲು ಯೋಜಿಸಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಅ.25 ರಂದು ಲಕ್ಷ್ಮಿ, ಚಂದರ್‌ನನ್ನು ದೆಹಲಿಯ ಮಿಥಾಪುರಕ್ಕೆ ಕರೆದಳು. ಅಲ್ಲಿಂದ ಆತನ ಜೊತೆ ಬೈಕ್‌ನಲ್ಲಿ ಫರಿದಾಬಾದ್‌ನ ಆತ್ಮದ್‌ಪುರದಲ್ಲಿರುವ ನಿರ್ಜನ ಪ್ರದೇಶಕ್ಕೆ ಹೋದಳು. ಅಲ್ಲಿ, ಕೇಶವ್ ಮತ್ತು ಅವನ ಇಬ್ಬರು ಸ್ನೇಹಿತರು ಚಂದರ್ ಮೇಲೆ ಹಲ್ಲೆ ನಡೆಸಿದರು. ಆತ ಸತ್ತ ನಂತರ ಆರೋಪಿಗಳು ಮೃತದೇಹವನ್ನು ಚರಂಡಿಯಲ್ಲಿ ಎಸೆದು ಸ್ಥಳದಿಂದ ಪರಾರಿಯಾಗಿದ್ದರು

error: Content is protected !!
Scroll to Top